ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮುಖ್ಯಮಂತ್ರಿ ಹುದ್ದೆಯು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಹೋಗುವ ಸಾಧ್ಯತೆ ಇದೆ ಎಂದು ತಿಳಿಸಿವೆ.
"ಭಾರತದ ಸಂವಿಧಾನದ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಎಂಬ ಪದವಿದೆ. ಶಿವಸೇನೆ ಸಂವಿಧಾನವನ್ನು ಅನುಸರಿಸುತ್ತದೆ. ಎಲ್ಲಾ ರೈತರು ಮತ್ತು ಸಾಮಾನ್ಯ ಜನರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಸಹಾಯ ನೀಡಬೇಕು. ಶಿವಾಜಿ ಮಹಾರಾಜ್ ಅವರು ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಮೂಲಕ ತಮ್ಮ ರಾಜ್ಯವನ್ನು ಮಾಡಿದರು" ಎಂದು ಶಿವಸೇನೆ ನಾಯಕ ಸಂಜಯ್ ರೌತ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನವೆಂಬರ್ 24 ರಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಅಯೋಧ್ಯೆ ಪ್ರವಾಸವನ್ನು ಮುಂದೂಡಲಾಗಿದೆ. ರಾಮ್ಜನ್ಮಭೂಮಿ ಸಂಕೀರ್ಣದ ಭದ್ರತೆಯಿಂದಾಗಿ ಯಾವುದೇ ರಾಜಕೀಯ ಪಕ್ಷಗಳ ಮುಖಂಡರಿಗೆ ಅಲ್ಲಿಗೆ ಹೋಗಲು ಭದ್ರತಾ ಸಂಸ್ಥೆಗಳು ಅವಕಾಶ ನೀಡಿಲ್ಲ.
ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಉಭಯ ಕಡೆಯವರ ನಡುವೆ ಮಾತುಕತೆ ಆರಂಭವಾಗಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗಿನ ಸಮರದೊಂದಿಗೆ ಎನ್ಡಿ ಮೈತ್ರಿಕೂಟದಿಂದ ಹೊರ ಬಂದಿರುವ ಶಿವಸೇನಾ ಈಗ ಕಾಂಗ್ರೆಸ್ ಹಾಗೂ ಎನ್ಸಿಪಿ ನೆರವಿನೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ. ಈಗ ಶಿವಸೇನಾ ಬಿಜೆಪಿ ಸಖ್ಯದಿಂದ ಹೊರಬಂದಿರುವುದು ಎನ್ಡಿಎ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ.
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ(Uddhav Thackeray) ಮಹಾರಾಷ್ಟ್ರದ(Maharashtra) ಮುಖ್ಯಮಂತ್ರಿಯಾಗಬಹುದು ಎಂದು ಮೂಲಗಳು ತಿಳಿಸಿವೆ. ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆಗಿನ ಒಪ್ಪಂದದಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ (Ajit Pawar) ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡುವ ನಿರೀಕ್ಷೆಯಿದ್ದು, ಜಯಂತ್ ಪಾಟೀಲ್ ಅವರಿಗೆ ಗೃಹ ಸಚಿವ ಸ್ಥಾನವನ್ನು ನೀಡಬಹುದು ಎಂದು ಹೇಳಲಾಗುತ್ತಿದೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ಪ್ರದರ್ಶನದಿಂದ ಉತ್ತೇಜಿತರಾಗಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗಿನ ಭೇಟಿಯಲ್ಲಿ ಮಾಡಿ 50:50 ಒಪ್ಪಂದವನ್ನು ಬಿಜೆಪಿ ಗೌರವಿಸಬೇಕೆಂದು ಒತ್ತಾಯಿಸಿದರು.
ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಪರೋಕ್ಷವಾಗಿ ವ್ಯಂಗವಾಡಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ದೇಶದಲ್ಲಿ ಉದ್ದ್ಯೋಗಗಳ ಸಂಖ್ಯೆಯಲ್ಲಿ ಕುಸಿತ ಕಾಣುತ್ತಿರುವುದು, ಹಾಗೂ ಉದ್ಯಮಗಳು ಮುಚ್ಚುತ್ತಿರುವುದು ಕಣ್ಣಿಗೆ ಕಾಣುತ್ತಿದೆ ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ಬಿಜೆಪಿ- ಶಿವಸೇನಾ ಶುಕ್ರವಾರದಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕೊನೆಗೂ ಮೈತ್ರಿ ಸೂತ್ರವನ್ನು ಕಂಡುಕೊಂಡಿದೆ, ಅದರ ಪ್ರಕಾರ 164-124 ರ ಸೂತ್ರದನ್ವಯ ಬಿಜೆಪಿ-ಶಿವಸೇನಾ 'ಮಹಾಯುತಿ' ಅದರ ಪ್ರಕಾರ ಸ್ಪರ್ಧಿಸಲಿದೆ ಎನ್ನಲಾಗಿದೆ.
ಒಂದು ತಿಂಗಳಿಗಿಂತಲೂ ಕಡಿಮೆ ಇರುವ ವಿಧಾನಸಭಾ ಚುನಾವಣೆಗೆ ಈಗ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ವಿಳಂಬದ ಮಧ್ಯೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಅವರೊಂದಿಗಿನ ಮಾತುಕತೆ ಉತ್ತಮವಾಗಿ ಪ್ರಗತಿಯಲ್ಲಿದೆ ಮತ್ತು ಶೀಘ್ರದಲ್ಲೇ ಅಂತಿಮ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.