ಅಪಘಾತದ ಮಾಹಿತಿಯ ನಂತರ ಸ್ಥಳೀಯ ಶಾಸಕ ರಾಜೀವ್ ಕುಮಾರ್ ಸಿಂಗ್ ಕೂಡ ಗಾಯಗೊಂಡವರ ಸ್ಥಿತಿ ತಿಳಿಯಲು ಜಿಲ್ಲಾ ಆಸ್ಪತ್ರೆಗೆ ತಲುಪಿದ್ದಾರೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರವಾಗಿ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಮತ್ತು ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.
ಜೂಜಾಟ ಮತ್ತು ಮದ್ಯದ ಚಟಕ್ಕೆ ಬಿದ್ದ ವ್ಯಕ್ತಿಯೊಬ್ಬಹಣವಿಲ್ಲದೆ ಓಡಿಹೋದ ನಂತರ ತನ್ನ ಹೆಂಡತಿಯನ್ನೇ ಜೂಜಿಗೆ ಇಟ್ಟು ತನ್ನ ಪಾಲನ್ನು ಕಳೆದುಕೊಂಡ ನಂತರ ಸ್ನೇಹಿತ ಮತ್ತು ಸಂಬಂಧಿಕರಿಗೆ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲು ಸೂಚಿಸಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಐಎಎನ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.
ಮುಖ್ಯ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯನ್ನು 45 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮತ್ತು ಅಪಘಾತ ಪ್ರಕರಣದ ತನಿಖೆಯನ್ನು ಏಳು ದಿನಗಳಲ್ಲಿ ಮುಗಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಸೂಚಿಸಿದೆ.
ಉನ್ನಾವ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಂಗಾರ್ವೌ ವಿಧಾನಸಭಾ ಕ್ಷೇತ್ರದ ಶಾಸಕರಾದ ಸೆಂಗಾರ್ ಅವರು ತಮ್ಮ ಬಳಿ ಕೆಲಸ ಕೇಳಿಕೊಂಡು ಬಂದ 16 ವರ್ಷದ ಬಾಲಕಿಯ ಮೇಲೆ ಜೂನ್ 4, 2017 ರಂದು ತಮ್ಮ ನಿವಾಸದಲ್ಲಿ ಅತ್ಯಾಚಾರ ಎಸಗಿದ್ದರು.
ಕೇಂದ್ರ ಸಚಿವ ಅಮಿತ್ ಶಾ ಈಗ ಕೊನೆಗೂ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನಾಗಿ ಯೋಗಿ ಆದಿತ್ಯನಾಥ್ ಅವರನ್ನು ಆಯ್ಕೆ ಮಾಡಿದ್ದರ ಹಿಂದಿನ ರಹಸ್ಯವನ್ನು ವಿವರಿಸಿದ್ದಾರೆ. ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅಮಿತ್ ಶಾ ಈ ವಿಚಾರವನ್ನು ಬಹಿರಂಗಪಡಿಸಿದರು. ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಕೂಡ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೂ ಉತ್ತರ ಪ್ರದೇಶ ಸರ್ಕಾರ ಒಟ್ಟು 76 ಪ್ರಕರಣಗಳನ್ನು ಹಿಂತೆಗೆದುಕೊಂಡಿದೆ ಎಂಬುದು ಗಮನಿಸಬೇಕಾದ ಅಂಶ.
ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಬಿಜೆಪಿ ಬೆಂಬಲಿಸುವವರ ಅಂಗಡಿಗಳಿಂದ ಸಾಮಾನುಗಳ ಖರೀದಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕೈರಾನಾ ಮತ್ತು ಅಲ್ಲಿನ ಸಮೀಪದ ಗ್ರಾಮಗಳ ಜನರಿಗೆ ಒತ್ತಾಯಿಸುತ್ತಿರುವುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿದೆ.
ಉತ್ತರ ಪ್ರದೇಶದ ಬಡವನೊಬ್ಬನಿಗೆ 128 ಕೋಟಿ ರೂ.ಗಿಂತ ಹೆಚ್ಚಿನ ವಿದ್ಯುತ್ ಬಿಲ್ ವಿಧಿಸಲಾಯಿತು. ಆದರೆ ಈ ತಪ್ಪನ್ನು ಒಪ್ಪಿಕೊಳ್ಳದ ವಿದ್ಯುತ್ ಇಲಾಖೆ ಮಾತ್ರ ಹಣ ಪಾವತಿಸದ ಹೊರತು ವಿದ್ಯುತ್ ಸಂಪರ್ಕವಿಲ್ಲ ಎಂದು ಹೇಳಿದೆ.
ವಿಧಾನಸಭೆಯಲ್ಲಿ ಹಲವು ಬಾರಿ ಲೋಟದಲ್ಲಿರುವ ನೀರನ್ನು ಪೂರ್ಣ ಬಳಸದೆ ವ್ಯರ್ಥವಾಗುವುದನ್ನು ಕಾಣುತ್ತೇವೆ. ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ವಿಧಾನಸಭೆಯ ಸ್ಪೀಕರ್ ತಿಳಿಸಿದ್ದಾರೆ.
ಭೂವಿವಾದಕ್ಕೆ ಸಂಬಂಧಿಸಿದಂತೆ ಪೂರ್ವ ಉತ್ತರ ಪ್ರದೇಶದ ಸೋನ್ಭದ್ರ ಜಿಲ್ಲೆಯ ಹಳ್ಳಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ಚಕಮಕಿಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿ ಸಿಂಗ್ ಅವರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರವಹಿಸಿಕೊಳ್ಳಲು ತಿಳಿಸಿದ್ದಾರೆ.
ಮೊರಾದಾಬಾದ್ನಲ್ಲಿರುವ ಗುಡಿಯಾ ಬಾಗ್ನ ನಾಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಕುಟುಂಬಕ್ಕೆ 4 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.