ರಾಮಮಂದಿರದ ನಂತರ ಇದೀಗ ಕೃಷ್ಣಮಂದಿರ ನಿರ್ಮಾಣ ಮಾಡುವುದು ನಮ್ಮ ಗುರಿಯಾಗಿದ್ದು, ಮುಂದಿನ 442 ದಿನಗಳಲ್ಲಿ ಮಥುರೆಯಲ್ಲಿ ಕೃಷ್ಣ ಮಂದಿರ ತಲೆ ಎತ್ತಲಿದೆ ಎಂದು ಉತ್ತರ ಪ್ರದೇಶದ ಆನಂದಧಾಮ್ ಪೀಠದ ಧಾರ್ಮಿಕ ಶಿಕ್ಷಕ ಮತ್ತು ಗುರೂಜಿ ರಿತೇಶ್ವರ್ ಜೀ ಮಹಾರಾಜ್ ಭವಿಷ್ಯ ನುಡಿದಿದ್ದಾರೆ.
Ayodhya Ram Mandir Cake: ಕರ್ನಾಟಕದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಬೇಕರಿಯೊಂದರಲ್ಲಿ 25 ಕೆಜಿ ಸಕ್ಕರೆ ಪಾಕದಿಂದ ತಯಾರಿಸಿದ ರಾಮ ಮಂದಿರದ ಪ್ರತಿಕೃತಿಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
ರೈತರನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವು ವಿಶೇಷ ಸೌಲಭ್ಯಗಳನ್ನು ನೀಡುತ್ತಿವೆ. ನೀವೂ ಸಹ ರೈತರಾಗಿದ್ದರೆ ನಿಮಗೊಂದು ಸಂತಸದ ಸುದ್ದಿ. ಸಾಗುವಳಿ ಮಾಡುವ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಅನೇಕ ವಿಶೇಷ ಪ್ರಯತ್ನಗಳನ್ನು ಮಾಡುತ್ತಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರವು ರೈತರ ಸಾಲ ಮನ್ನಾ ಯೋಜನೆಯಡಿ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಹಜರತ್ಗಂಜ್ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದು ಮೂವರು ಮಕ್ಕಳು ಸೇರಿದಂತೆ ಒಂಬತ್ತು ಮನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ.
ಮಗ ಸಾಕಿದ್ದ ಮುದ್ದಿನ ಪಿಟ್ಬುಲ್ ನಾಯಿಯಿಂದಲೇ ತಾಯಿ ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಉತ್ತರ ಪ್ರದೇಶದ ಲಖನೌದ ಕೈಸರ್ಬಾಗ್ ಪ್ರದೇಶದ ಬಂಗಾಳಿ ಟೋಲಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಚಿವರು ರಾಜ್ಯದ ಯಾವುದೇ ನಗರಗಳಿಗೆ ತೆರಳಿದರೆ ಐಷಾರಾಮಿ ಹೋಟೆಲ್ಗಳ ಬದಲು ಸರ್ಕಾರಿ ಅತಿಥಿ ಗೃಹಗಳಲ್ಲಿಯೇ ತಂಗಬೇಕು ಎಂಬ ಆದೇಶವನ್ನು ಸಿಎಂ ಯೋಗಿ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬಸ್ಥರನ್ನು ಆಪ್ತ ಕಾರ್ಯದರ್ಶಿಗಳನ್ನಾಗಿ ನೇಮಿಸುವಂತಿಲ್ಲ ಎಂದು ಸೂಚಿಸಿದ್ದಾರೆ.
ರಾಜ್ಯದಲ್ಲಿ ಹೊಸ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ಸರ್ಕಾರ ಇಂದಿನಿಂದ ಸಿನೆಮಾ ಹಾಲ್ಗಳು, ಮಲ್ಟಿಪ್ಲೆಕ್ಸ್ಗಳು, ಜಿಮ್ಗಳು ಮತ್ತು ಕ್ರೀಡಾಂಗಣಗಳನ್ನು ಮತ್ತೆ ತೆರೆಯಲು ಅವಕಾಶ ನೀಡಿದೆ.
ಶನಿವಾರ ಸಂಜೆ ವರನ ಕಡೆಯವರು ದಿಬ್ಬಣದ ಜೊತೆಗೆ ಕಲ್ಯಾಣ ಮಂಟಪಕ್ಕೆ ಆಗಮಿಸಿದ್ದರು. ವಧುವಿಗೆ ತನ್ನ ಭಾವೀ ಪತಿಯ ಶೈಕ್ಷಣಿಕ ಅರ್ಹತೆಯ ಬಗ್ಗೆ ಮೊದಲೇ ಸ್ವಲ್ಪ ಸಂದೇಹ ಇತ್ತು. ಇನ್ನೇನು ಮಾಲೆ ಹಾಕಿಕೊಂಡು, ತಾಳಿ ಕಟ್ಟಿ, ಸಪ್ತ ಪದಿ ತುಳಿಯಬೇಕೆನ್ನುವಷ್ಟರಲ್ಲಿ ವಧುವಿಗೆ ಏನೋ ಸಂದೇಹ ಬಲವಾಗಿ ಬಿಟ್ಟಿದೆ.
ಕರೋನವೈರಸ್ COVID-19 ಸೋಂಕುಗಳ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ನಿರ್ಬಂಧಗಳಿಂದ ಜನರು ಮನೆಯೊಳಗೆ ಉಳಿದುಕೊಂಡಿದ್ದರೆ, ಈ ಅವಧಿಯಲ್ಲಿ ದೇಶದಲ್ಲಿ ಜನಸಂಖ್ಯಾ ಸ್ಫೋಟ ಸಂಭವಿಸುವ ಭೀತಿಯೂ ಪರಿಸ್ಥಿತಿಗೆ ಕಾರಣವಾಗಿದೆ.
ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಎಸ್ಪಿ ಶಾಸಕರು ತಮ್ಮ 10 ಲಕ್ಷ ರೂಪಾಯಿ ಕಳ್ಳತನವಾಗಿದೆ. ಒಂದು ವೇಳೆ ಈ ಹಣ ವಾಪಸ್ ಬರೆದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿರುವ ಘಟನೆ ನಡೆದಿದೆ.
ಅಯೋಧ್ಯೆ ವಿವಾದವನ್ನು 24 ಗಂಟೆಯಲ್ಲಿ ಬಗೆ ಹರಿಸಬಹುದು ಎಂದು ಶನಿವಾರದಂದು ಹೇಳಿಕೆ ನೀಡಿದ್ದ ಸಿಎಂ ಯೋಗಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ " ಜನರು ಈಗ 90 ದಿನಗಳ ಕಾಲಾವಕಾಶವನ್ನು ನೀಡಿದ್ದಾರೆ,ಆದ್ದರಿಂದ ದನಕರುಗಳಿಂದ ಬೆಳೆಗಳನ್ನು ರಕ್ಷಿಸುವ ಕೆಲಸ ಮಾಡಲಿ" ಎಂದು ಸವಾಲು ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.