Asia Cup 2023 final: ಏಷ್ಯಾಕಪ್ ಫೈನಲ್’ಗೂ ಮುನ್ನ ಅಕ್ಷರ್ ಪಟೇಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಫೈನಲ್ ಪಂದ್ಯ ಆಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ಬಾಂಗ್ಲಾದೇಶ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಅಕ್ಷರ್ ಗಾಯಗೊಂಡಿದ್ದರು.
IND vs IRE, 1st T20: ವಾಷಿಂಗ್ಟನ್ ಸುಂದರ್ ಫೆಬ್ರವರಿ 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ನಂತರ ಗಾಯದ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ.
Team India News: ಆಗಸ್ಟ್ 3 ರಿಂದ ಆರಂಭವಾಗಲಿರುವ 5 ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಭಾರತ ತಂಡದ ಆಡಳಿತವು ಈ ಅಪಾಯಕಾರಿ ಆಟಗಾರನಿಗೆ ಪ್ಲೇಯಿಂಗ್ XIನಲ್ಲಿ ಅವಕಾಶ ನೀಡಿದರೆ, ತನ್ನ ಕಿಲ್ಲರ್ ಆಟದಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿನ ಸುಳಿಗೆ ಸಿಲುಕಿಸಬಹುದು.
IPL 2023: ಮಂಡಿರಜ್ಜು ಗಾಯದಿಂದಾಗಿ ಸನ್ ರೈಸರ್ಸ್ ಹೈದರಾಬಾದ್ (SRH) ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ IPL 2023ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಸ್ವತಃ ಸನ್ ರೈಸರ್ಸ್ ಹೈದರಾಬಾದ್ ತಂಡವೇ ಟ್ವಿಟರ್ನಲ್ಲಿ ಮಾಹಿತಿ ನೀಡಿದೆ.
IPL 2023: ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಪರ ವಾಷಿಂಗ್ಟನ್ ಸುಂದರ್ ಮತ್ತು ಮಾರ್ಕೊ ಯಾನ್ಸೆನ್ ಕ್ರೀಸ್’ನಲ್ಲಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಾಗಿ ವೇಗದ ಬೌಲರ್ ಮುಖೇಶ್ ಕುಮಾರ್ ಪಂದ್ಯದ ಕೊನೆಯ ಓವರ್ ಮಾಡಲು ಬಂದರು. ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮುಖೇಶ್ ಕುಮಾರ್ ಕೊನೆಯ ಓವರ್’ನಲ್ಲಿ ಕೇವಲ 5 ರನ್ ನೀಡಿ ತಂಡಕ್ಕೆ ಜಯ ತಂದುಕೊಟ್ಟರು. ಡೆಲ್ಲಿ ಕ್ಯಾಪಿಟಲ್ಸ್ 7 ರನ್’ಗಳಿಂದ ಸನ್’ರೈಸರ್ಸ್ ಹೈದರಾಬಾದ್ ಅನ್ನು ಸೋಲಿಸಿತು
Suryakumar Yadav apologized to Washington Sundar: ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 31 ಎಸೆತಗಳಲ್ಲಿ ಅಜೇಯ 26 ರನ್ ಗಳಿಸಿ ಟೀಂ ಇಂಡಿಯಾವನ್ನು ಗೆಲ್ಲುವಂತೆ ಮಾಡಿದ್ದಾರೆ. ಈ ಇನ್ನಿಂಗ್ಸ್ಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ನೀಡಲಾಯಿತು. ಪಂದ್ಯದ ನಂತರ ಸೂರ್ಯಕುಮಾರ್ ಯಾದವ್ ತಮ್ಮ ಸಹ ಆಟಗಾರ ವಾಷಿಂಗ್ಟನ್ ಸುಂದರ್ ಬಳಿ ಕ್ಷಮೆಯಾಚಿಸಿದರು.
India vs New Zealand 2nd T20: ಸೂರ್ಯಕುಮಾರ್ ಯಾದವ್ ಕಳೆದ ಕೆಲವು ಸಮಯದಿಂದ ಅತ್ಯುತ್ತಮ ಫಾರ್ಮ್ನಲ್ಲಿ ಓಡುತ್ತಿದ್ದಾರೆ. ಅವರು ಯಾವುದೇ ಬೌಲಿಂಗ್ ದಾಳಿಯನ್ನು ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. 2022 ರಲ್ಲಿ ಅವರು ಅತಿ ಹೆಚ್ಚು ರನ್ ಗಳಿಸಿ. ಐಸಿಸಿ ಅವಾರ್ಡ್ ಗೆ ಭಾಜನರಾಗಿದ್ದರು. ಟೀಂ ಇಂಡಿಯಾ ಪರ ಹಲವು ಪಂದ್ಯಗಳನ್ನು ಸ್ವಂತ ಬಲದಿಂದ ಗೆದ್ದಿದ್ದಾರೆ. ಭಾರತ ಪರ ಇದುವರೆಗೆ 46 ಟಿ20 ಪಂದ್ಯಗಳಲ್ಲಿ 1625 ರನ್ ಗಳಿಸಿದ್ದು, ಅದರಲ್ಲಿ 3 ಶತಕ ಸಿಡಿಸಿದ್ದಾರೆ.
IND vs NZ: ಡೆರಿಲ್ ಮಿಚೆಲ್ 30 ಎಸೆತಗಳಲ್ಲಿ ಅಜೇಯ 59 ರನ್ ಗಳಿಸಿದರು. ನ್ಯೂಜಿಲೆಂಡ್ನ ಇನಿಂಗ್ಸ್ನ ಕೊನೆಯ ಓವರ್ನ ಆರಂಭದ ಮೊದಲು ಸ್ಕೋರ್ 149/6 ಆಗಿತ್ತು. ಅವರು 160 ಕ್ಕಿಂತ ಹೆಚ್ಚು ರನ್ ಮಾಡುತ್ತಾರೆ ಎಂದು ಅವರೂ ಭಾವಿಸಿರಲಿಲ್ಲ, ಆದರೆ ಡೆರಿಲ್ ಮಿಚೆಲ್ ಅರ್ಷದೀಪ್ ಸಿಂಗ್ ಅವರ ಇನ್ನಿಂಗ್ಸ್ನ ಕೊನೆಯ ಓವರ್ನಲ್ಲಿ ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸುವ ಮೂಲಕ 27 ರನ್ ಗಳಿಸಿದರು. ಈ ಪಂದ್ಯವನ್ನು ನ್ಯೂಜಿಲೆಂಡ್ 21 ರನ್ಗಳಿಂದ ಗೆದ್ದುಕೊಂಡಿತು.
India vs New Zealand, 1st T20I: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಈ ಆಟಗಾರನಿಗೆ ಅವಕಾಶ ನೀಡುವ ಮೂಲಕ ಬಿಸಿಸಿಐ ತಪ್ಪು ಮಾಡಿತ್ತು. ಹೀಗಿರುವಾಗ ನಾಯಕ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋಲಿನ ರಿಸ್ಕ್ ತೆಗೆದುಕೊಳ್ಳದೆ ಈ ಆಟಗಾರನನ್ನು ಪ್ಲೇಯಿಂಗ್ ಇಲೆವೆನ್ ನಿಂದ ಕೈಬಿಡಲಿದ್ದಾರೆ.
IND vs NZ 3rd ODI : ಈ ಆಟಗಾರನಿಗೆ ಅವಕಾಶ ನೀಡುವ ಮೂಲಕ ನಾಯಕ ರೋಹಿತ್ ಶರ್ಮಾ ತಪ್ಪು ಮಾಡಿದರು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಜೊತೆಗೆ ಟೀಂ ಇಂಡಿಯಾದ ಈ ಆಟಗಾರನ ODI ವೃತ್ತಿಜೀವನವು ಕೊನೆಗೊಳ್ಳುವಂತಿದೆ.
Cricketers Visit Mahakaleshwar Temple: 3ನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತದ ಆಟಗಾರರು ಉಜ್ಜಯಿನಿಯ ದೇವಸ್ಥಾನದಲ್ಲಿ ಭಸ್ಮಾರ್ಥದಲ್ಲಿ ಪಾಲ್ಗೊಂಡಿದ್ದರು. ಟೀಂ ಇಂಡಿಯಾದ ಆಟಗಾರರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸಾಮಾನ್ಯ ಜನರ ನಡುವೆ ಕುಳಿತು ಭಸ್ಮಾರ್ಥಿಯನ್ನು ವೀಕ್ಷಿಸಿದರು. ಈ ವೇಳೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಶಿವಭಕ್ತಿಯಲ್ಲಿ ಮಗ್ನರಾಗಿದ್ದರು.
IND vs NZ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್ಪುರದಲ್ಲಿ ಇಂದು ಆರಂಭವಾಗಿದೆ. ಆದ್ರೆ, ಈ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ವಿಲನ್ ಆಗಿ ಕಾಡಿದ್ದಾರೆ.
India vs Sri Lanka : ಭಾರತ ತಂಡವು ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ODI ಸರಣಿಯ ಕೊನೆಯ ಪಂದ್ಯ ನಾಳೆ ನಡೆಯಲಿದೆ. ಅನುಭವಿ ಆರಂಭಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ತಂಡವು ಪ್ರಸ್ತುತ 2-0 ಮುನ್ನಡೆ ಸಾಧಿಸಿದೆ.
Rohit Sharma Abuse Washington Sundar: ಭಾನುವಾರ ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದ ನಿರ್ಣಾಯಕ ಕ್ಷಣಗಳಲ್ಲಿ ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಆಟಗಾರನನ್ನು ನಿಂದಿಸಿದ್ದರು. ಕೊನೆಯ ಕೆಲವು ಓವರ್ಗಳಲ್ಲಿ ಪಂದ್ಯ ಕೈ ತಪ್ಪುತ್ತಿರುವುದನ್ನು ಕಂಡು ನಾಯಕ ರೋಹಿತ್ ಶರ್ಮಾ ಸಿಟ್ಟುಗೊಂಡಿದ್ದು, ಪರಿಣಾಮ ಮೈದಾನದಲ್ಲಿಯೇ ಆಟಗಾರನನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
India vs New Zealand 3rd ODI : ಮೊದಲ ಏಕದಿನ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಸೋಲನ್ನು ಎದುರಿಸಬೇಕಾಗಿತ್ತು, ಆದರೆ ಭಾರತ ತಂಡದ ಸರಣಿ ಸೋಲಿನಲ್ಲೂ ಟೀಂ ಇಂಡಿಯಾಗೆ ಈ ಆಟಗಾರ ಹೀರೋ ಆಗಿ ಹೊರಹೊಮ್ಮಿದ್ದಾರೆ. ಈ ಆಟಗಾರ ರವೀಂದ್ರ ಜಡೇಜಾ ರೀತಿ ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್ನಲ್ಲಿ ಪರಿಣತಿ ಹೊಂದಿದ್ದಾರೆ.
Washington Sunder: ಇನ್ನು ಈ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ಅಬ್ಬರ ನಿರೀಕ್ಷಿಸಿದ್ದ ಪ್ರೇಕ್ಷಕರಿಗೆ ಮನರಂಜನೆಯೂಟ ಬಡಿಸಿದ್ದು, ವಾಷಿಂಗ್ಟನ್ ಸುಂದರ್. ಏಳನೇ ಕ್ರಮಾಂಕದಲ್ಲಿ ಕ್ರೀಸ್ ಗೆ ಇಳಿದ ಸುಂದರ್ ಅಬ್ಬರಿಸಿದ್ದರು. ಇನ್ನಿಂಗ್ಸ್ನ ಅಂತಿಮ ಓವರ್ನಲ್ಲಿ ಸುಂದರ್ ಸ್ಟಂಟ್ ಗಳ ಮೂಲಕ ರನ್ ಕಲೆಹಾಕಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರು ಬೆನ್ನುನೋವಿನ ಕಾರಣದಿಂದ ಪಂದ್ಯದಿಂದ ಹೊರಗುಳಿದಿದ್ದರು. ಬುಮ್ರಾ ಸ್ಥಾನವನ್ನು ಚಹಾರ್ ತುಂಬುತ್ತಾರೆ ಎಂದು ಭಾವಿಸಿದರೆ, ಇದೀಗ ಸಮಸ್ಯೆ ಹಿನ್ನೆಲೆಯಲ್ಲಿ ಚಹಾರ್ ಕೂಡ ಪಂದ್ಯದಿಂದ ಹೊರಗುಳಿದಿದ್ದಾರೆ.
ಫೆಬ್ರವರಿ 16 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಮುಂಬರುವ 3 ಪಂದ್ಯಗಳ T20I ಸರಣಿಗೆ ಗಾಯಾಳು ವಾಷಿಂಗ್ಟನ್ ಸುಂದರ್ ಬದಲಿಗೆ ಕುಲದೀಪ್ ಯಾದವ್ ಅವರನ್ನು ಫೆಬ್ರವರಿ 14 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಹೆಸರಿಸಿದೆ.
ರೋಹಿತ್ ತಂಡದ ನಾಯಕತ್ವ ವಹಿಸಿಕೊಂಡ ನಂತರ ಕೆಲವು ಹೊಸ ಮತ್ತು ಹಳೆಯ ಆಟಗಾರರು ತಂಡಕ್ಕೆ ಮರಳಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 5 ವರ್ಷಗಳ ಕಾಲ ತಂಡದಿಂದ ಹೊರಗಿಟ್ಟ ಆಟಗಾರನಿಗೆ ರೋಹಿತ್ ಅವಕಾಶ ನೀಡಿದ್ದಾರೆ, ಆದರೆ ಇದೀಗ ಈ ಆಟಗಾರ ರೋಹಿತ್ ತಂಡಕ್ಕೆ ದೊಡ್ಡ ಅಸ್ತ್ರವಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.