ಲೋಕಸಭೆ ಸಂಸದರಾಗಿ ಅನರ್ಹಗೊಂಡ ನಂತರ ಮೊದಲ ಬಾರಿಗೆ ವಯನಾಡ್ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು "ಎಂಪಿ ಎನ್ನುವುದು ಕೇವಲ ಟ್ಯಾಗ್ ಅಥವಾ ಸ್ಥಾನ ಅಷ್ಟೇ ಆದರೆ ಅದು ವಯನಾಡ್ ಜನರನ್ನು ಪ್ರತಿನಿಧಿಸುವುದನ್ನು ತಡೆಯುವುದಿಲ್ಲ ಎಂದು ಹೇಳಿದರು.
ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ಇಂದು ಉಪಚುನಾವಣೆ ಘೋಷಿಸದೆ ಇರುವುದು ಬಹುತೇಕರಿಗೆ ಅಚ್ಚರಿ ಮೂಡಿಸಿದೆ.ಈ ವಿಚಾರವಾಗಿ ಚುನಾವಣಾ ಆಯೋಗ ಆತುರಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕೇರಳದ ವಯನಾಡ್ ಜಿಲ್ಲೆಯ ತಿರುನೆಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನ್ವೇಲಿ ಬುಡಕಟ್ಟು ವಸಾಹತು ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಕ್ಯಾಸನೂರು ಫಾರೆಸ್ಟ್ ಡಿಸೀಸ್ ನಿಂದ ಬಳಲುತ್ತಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡಕ್ಕೆ ಆಗಸ್ಟ್ 26 ರಿಂದ ಮೂರು ದಿನಗಳ ಭೇಟಿ ನೀಡಿ ಸ್ಥಳೀಯರು ಮತ್ತು ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದಾರೆ.ಅಲ್ಲದೆ ಇದುವರೆಗೆ ಪ್ರವಾಹದ ನಂತರ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.
ವಯನಾಡಿನ ಮತದಾರರಾಗಿರುವ ನಿವೃತ್ತ ನರ್ಸ್ ರಾಜಮ್ಮ ಅವರು, ಜೂನ್ 19, 1970ರಂದು ರಾಹುಲ್ ಗಾಂಧಿ ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಜನಿಸಿದ ಸಂದರ್ಭದಲ್ಲಿ ಅದೇ ಆಸ್ಪತ್ರೆಯಲ್ಲಿ ಶುಶ್ರೂಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಪೆರಿಂಥಾಳಣ್ಣ ಕ್ರಿಕೆಟ್ ಕ್ರೀಡಾಂಗಣದಲ್ಲಿ ವಯನಾಡ್ ವಿರುದ್ಧದ ಕಾಸರಗೋಡು ಬಾಲಕಿಯರ ಅಂಡರ್ -19 ಅಂತರ-ಜಿಲ್ಲೆ ಪಂದ್ಯದಲ್ಲಿ ತಂಡವೊಂದರ ಸ್ಕೋರ್ ಬೋರ್ಡ್ ನಲ್ಲಿ ಮೊತ್ತ ದಾಖಲಾಗಿದ್ದು ಹೀಗೆ 0,0,0,0,0,0,0,0,0,0,0 ....!
ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ರಾಹುಲ್ ಹುಟ್ಟಿದಾಗ ಮಗುವನ್ನು ಮೊದಲು ಎತ್ತಿಕೊಂಡಿದ್ದೇ ನಾನು. ಅಲ್ಲಿ ನಾನಾಗ ನರ್ಸ್ ಆಗಿ ಕೆಲಸ ಮಾಡುತ್ತಿದ್ದೆ ಎಂದು ವೃದ್ಧೆ ರಾಜಮ್ಮ ಹೇಳಿದ್ದಾರೆ.
"ದಕ್ಷಿಣ ಮತ್ತು ಉತ್ತರ ಭಾರತಗಳೆಂಬುದು ಇಲ್ಲ. ಅವರೆಡೂ ಒಂದೇ. ಭಾರತದ ಅಖಂಡತೆಯ ಭವ್ಯತೆ ಸಾರಲು ತಾವು ಕೇರಳದಿಂದಲೂ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ವಯನಾಡ್'ನಿಂದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುವ ಮೂಲಕ ಕಾಂಗ್ರೆಸ್ ದೇಶಕ್ಕೆ ಯಾವ ಸಂದೇಶ ನೀಡಲು ಹೊರಟಿದೆ? ಒಂದು ರೀತಿಯಲ್ಲಿ ಸಿಪಿಐ ಮತ್ತು ಎಡಪಂಥೀಯರ ವಿರುದ್ಧ ಹೋರಾಡಲು ರಾಹುಲ್ ಗಾಂಧಿಯನ್ನು ಕಣಕ್ಕಿಳಿಸುವ ಮೂಲಕ ಮುಜುಗರ ಉಂಟುಮಾಡಿದೆ ಭಾರತ್ ಕಮ್ಯೂನಿಸ್ಟ್ ಪಕ್ಷದ ನಾಯಕ ಡಿ.ರಾಜಾ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಜೊತೆಗೆ ಕೇರಳದ ವಯನಾಡಿನಲ್ಲಿಯೂ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.ಇಂದು ನಾಮಪತ್ರ ಸಲ್ಲಿಸುವ ವೇಳೆ ರಾಹುಲ್ ಗಾಂಧಿ ಜೊತೆಗೆ ಸಾಥ್ ನೀಡಿದ ಪ್ರಿಯಾಂಕಾ ಗಾಂಧಿ ಈಗ ಟ್ವೀಟ್ ಮೂಲಕ ವಯನಾಡಿನ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಗೆ ಕೇರಳದ ವಯನಾಡ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.ಅಮೇಥಿ ಕ್ಷೇತ್ರದ ಜೊತೆಗೆ ವಯನಾಡ್ ನಲ್ಲಿಯೂ ಸ್ಪರ್ಧಿಸುತ್ತಿರುವ ರಾಹುಲ್ ಇಂದು ಜಿಲ್ಲಾಧಿಕಾರಿ ಜಿ.ಆರ್.ಅಜಯಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಉತ್ತರಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ, ಎರಡನೇ ಕ್ಷೇತ್ರವಾಗಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದಲೂ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ದಕ್ಷಿಣ ಭಾರತದ ಜನರಿಗೆ ಪ್ರಧಾನಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂಬ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಜನತೆಗೆ ನಾವು ಅವರೊಂದಿಗೆ ಇದ್ದೇವೆ ಎಂಬ ಸಂದೇಶ ರವಾನೆ ಮಾಡಲು ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.