2019 ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ ನಂತರ ಎಚ್ಚೆತ್ತುಕೊಂಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ನೂತನ ಅಭಿಯಾನದ ಮೂಲಕ ಜನರ ಒಲವು ಗಳಿಸಿ ಕೊಳ್ಳುವತ್ತ ಮುಂದಾಗಿದ್ದಾರೆ.
ಮಮತಾ ಬ್ಯಾನರ್ಜಿಯ ಸಹಚರರು ಹಾಗೂ ತೃಣಮೂಲ ಕಾಂಗ್ರೆಸ್ನ ನಾಯಕರು ಹೊರಗಿನ ಗೂಂಡಾಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದನ್ನೆಲ್ಲ ತಿಳಿದಿದ್ದರೂ ಪೊಲೀಸರು ದೀದಿಯ ಸೇನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.
ಚಿನ್ನ ಮತ್ತು ತಾಮ್ರದ ಸರ, ಉಂಗುರ, ಕಿವಿಯೋಲೆ, ಗೆಜ್ಜೆ, ಬ್ರಾಸ್ಲೇಟ್, ವಾಚ್ ಸೇರಿದಂತೆ 1.5 ಕೆ.ಜಿ. ತುಕಡ ಆಭರಣಗಳು ಮತ್ತು 5 ಹಾಗೂ 10 ರೂ. ಮೌಲ್ಯದ ಒಟ್ಟು 90 ನಾಣ್ಯಗಳನ್ನು ಆಕೆಯ ಹೊಟ್ಟೆಯಿಂದ ಹೊರತೆಗೆಯಲಾಗಿದೆ.
ಸಿಪಿಎಂ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪಶ್ಚಿಮ ಬಂಗಾಳದ 107 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಹೇಳಿದ್ದಾರೆ.
ಶನಿವಾರದಂದು ಪಶ್ಚಿಮ ಬಂಗಾಳ ಪೊಲೀಸರು ನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಒಳಗೊಂಡ ಹಿಂಸಾಚಾರದ ಹಿನ್ನಲೆಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ 112 ತುಣುಕುಗಳ ಲೈವ್ ಬಾಂಬ್, ಆರು ದೇಶ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ನಿರ್ದಿಷ್ಟ ಮತ್ತು ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 399 ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇತರ ರಾಜ್ಯಗಳಲ್ಲಿ ಅನೇಕ ಹಿಂಸಾಚಾರಗಳು ನಡೆದಿದ್ದರೂ ಪಶ್ಚಿಮ ಬಂಗಾಳವನ್ನು ಸಂಸತ್ತಿನಲ್ಲಿ ಅನಗತ್ಯವಾಗಿ ಗುರಿಯಾಗಿಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಹೇಳಿದೆ.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ, ಪೊಲೀಸ್ ಅಧಿಕಾರಿಗಳು ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ಇತ್ತೀಚಿನ ಹೇಳಿಕೆಯ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಾಗ್ಧಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಬಂಡೆಲ್ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ನೀತು ರಾಮ್ ಅವರ ಪತಿ ದಿಲೀಪ್ ರಾಮ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಶನಿವಾರ ಗುಂಡಿಕ್ಕಿ ಕೊಂದಿದ್ದಾರೆ.ರೈಲ್ವೆ ನಿಲ್ದಾಣದ ಐದನೇ ಪ್ಲಾಟ್ಫಾರ್ಮ್ನಲ್ಲಿ ಈ ಘಟನೆ ಸಂಭವಿಸಿದೆ.
ಕೋಲ್ಕತ್ತಾದ ಉತ್ತರಕ್ಕೆ ಇರುವ ಉತ್ತರ 24 ಪರಗಣ ಜಿಲ್ಲೆಯ ಭಟ್ಪಾರದಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತರ ನಡುವೆ ನಡೆದ ಘರ್ಷಣೆಯಲ್ಲಿ 17 ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲ್ಲಲಾಯಿತು ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಪೊಲೀಸ್ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಕರೆದು ತುರ್ತು ಸಭೆ ನಡೆಸಿದರು.
ರಾಜ್ಯಪಾಲರ ನಿರ್ಧಾರವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್, ಈ ಕೆಲಸವನ್ನು ರಾಜ್ಯ ಸರ್ಕಾರ ಮೊದಲೇ ಮಾಡಬೇಕಿತ್ತು. ಈ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನಿಭಾಯಿಸಬೇಕಿತ್ತು ಎಂದು ಹೇಳಿದ್ದಾರೆ.
ಅಪರಿಚಿತ ದುಷ್ಕರ್ಮಿಗಳು ಸೋಮವಾರ ರಾತ್ರಿ 10.30ರ ಸುಮಾರಿಗೆ ಮನೆಯೊಂದರ ಮೇಲೆ ಎರಡು ಕಚ್ಚಾ ಬಾಂಬ್ ಗಳನ್ನು ಎಸೆದ ಪರಿಣಾಮ ಮೊಹಮ್ಮದ್ ಹಲೀಮ್ (57) ಮತ್ತು ಮೊಹಮ್ಮದ್ ಮುಷ್ತಾಕ್ (60)ಎಂಬುವರು ಮೃತಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.