ಮುಸ್ಲಿಮರ ವಿರುದ್ಧದ ಕ್ರಮ ಮತ್ತು ಬುಲ್-ಡೋಜರ್ ನೀತಿಗಳ ಬಗ್ಗೆ ಕಾನೂನು ಗಣ್ಯರು ಪ್ರಶ್ನೆಗಳನ್ನು ಎತ್ತಿರುವ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಹೇಳಿದೆ.
ಅಫ್ರೀನ್ ಫಾತಿಮಾಗೆ ಇದ್ದ ಶಾಹೀನ್ ಬಾಗ್ ಸಂಪರ್ಕವು ಮುನ್ನೆಲೆಗೆ ಬಂದಿದೆ. ಜೆಎನ್ಯುನಲ್ಲಿ ಭಯೋತ್ಪಾದಕ ಅಫ್ಜಲ್ ಗುರುವನ್ನು ಬೆಂಬಲಿಸಿ ಘೋಷಣೆಗಳನ್ನು ಎತ್ತಿದ ಮತ್ತು ವಕಾಲತ್ತು ವಹಿಸಿದ ಆರೋಪ ಈಕೆಯ ಮೇಲಿದೆ. ಫಾತಿಮಾ ಕೂಡ ಶಾರ್ಜೀಲ್ ಇಮಾಮ್ ಜೊತೆ ಸಂಪರ್ಕದಲ್ಲಿದ್ದಳು ಎಂದು ಸಹ ತಿಳಿದುಬಂದಿದೆ.
ಮುಂಬೈ ಸೇರಿದಂತೆ ನಾಗರಿಕ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಬಿಜೆಪಿ ನಾಯಕ ಕೃಪಾ ಶಂಕರ್ ಸಿಂಗ್ ಅವರು ಉತ್ತರ ಪ್ರದೇಶದ ಶಾಲೆಗಳಲ್ಲಿ ಮರಾಠಿಯನ್ನು ಐಚ್ಛಿಕ ಭಾಷೆಯಾಗಿ ಪರಿಚಯಿಸುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಮೊದಲು ಕೆತ್ತಿದ ಶಿಲಾನ್ಯಾಸ ನೆರವೇರಿಸಿ, ಗರ್ಭ ಗೃಹ ನಿರ್ಮಾಣಕ್ಕೆ ಚಾಲನೆ ನೀಡಿದರು. ಮಂದಿರ ನಿರ್ಮಾಣ ಯೋಜನೆಯ ನೇತೃತ್ವ ವಹಿಸಿರುವ ರಾಮ ಜನ್ಮಭೂಮಿ ಟ್ರಸ್ಟ್, ಕಳೆದ ವಾರ ರಾಜಸ್ಥಾನದ ಮಕ್ರಾನಾದ ಮಾರ್ಬಲ್ಗಳನ್ನು ಗರ್ಭ ಗೃಹ ನಿರ್ಮಾಣಕ್ಕೆ ಬಳಸಲಾಗುವುದು ಎಂದು ತಿಳಿಸಿತ್ತು.
Yogi Adityanath: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ ಮತ್ತು ನೈಮಿಶ್ ಧಾಮದಂತೆ ದೇವಾಲಯಗಳ ಪಟ್ಟಣವಾದ ಕಾಶಿಯು ಎಚ್ಚರಗೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.
ಈಗ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಮತ್ತು ಈ ರೀತಿಯ ವಂಚನೆಯನ್ನು ತಡೆಗಟ್ಟಲು ಹೊಸ ನಿಯಮಗಳನ್ನು ಜಾರಿ ಮಾಡಿದೆ. ಈ ಹಿಂದೆ ಸರ್ಕಾರ ಉಚಿತ ಪಡಿತರ ನೀಡುವ ಅವಧಿಯನ್ನು ಸೆಪ್ಟೆಂಬರ್ವರೆಗೆ ವಿಸ್ತರಿಸಿದೆ.
ಮಹಾರಾಷ್ಟ್ರದ ರಾಜಧಾನಿ ಮುಂಬಯಿಯಲ್ಲಿ ವಾಸಿಸುವ ಯುಪಿ ನಿವಾಸಿಗಳಿಗಾಗಿ ಉತ್ತರ ಪ್ರದೇಶ ಸರ್ಕಾರ ತನ್ನ ಕಚೇರಿಯನ್ನು ತೆರೆಯಲಿದೆ. ಕಚೇರಿಯಿಂದ ಮುಂಬಯಿಯಲ್ಲಿ ವಾಸಿಸುವ ಯುಪಿ ಜನರಿಗೆ ಅನುಕೂಲವಾಗಲಿದೆ.
ನಾಲ್ಕು ಜನರಿಂದ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯು ಪ್ರಕರಣ ದಾಖಲಿಸಲು ಹೋಗಿದ್ದ ಸಂದರ್ಭದಲ್ಲಿ ಲಲಿತ್ಪುರದ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇತ್ತೀಚಿಗೆ ಕೆಲವು ರಾಜ್ಯಗಳಲ್ಲಿ ಹಬ್ಬಗಳ ಸಂದರ್ಭದಲ್ಲಿ ಹಿಂಸಾಚಾರದಂತಹ ಘಟನೆಗಳು ನಡೆದಿರುವ ಬೆನ್ನಲೇ ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಅನುಮತಿ ಇಲ್ಲದೆ ಯಾವುದೇ ಧಾರ್ಮಿಕ ಮೆರವಣಿಗೆಗಳನ್ನು ನಡೆಸುವಂತಿಲ್ಲ ಮತ್ತು ಧ್ವನಿವರ್ಧಕಗಳ ಬಳಕೆಯಿಂದ ಅನ್ಯರಿಗೆ ತೊಂದರೆ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
ಸಚಿವರು ರಾಜ್ಯದ ಯಾವುದೇ ನಗರಗಳಿಗೆ ತೆರಳಿದರೆ ಐಷಾರಾಮಿ ಹೋಟೆಲ್ಗಳ ಬದಲು ಸರ್ಕಾರಿ ಅತಿಥಿ ಗೃಹಗಳಲ್ಲಿಯೇ ತಂಗಬೇಕು ಎಂಬ ಆದೇಶವನ್ನು ಸಿಎಂ ಯೋಗಿ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬಸ್ಥರನ್ನು ಆಪ್ತ ಕಾರ್ಯದರ್ಶಿಗಳನ್ನಾಗಿ ನೇಮಿಸುವಂತಿಲ್ಲ ಎಂದು ಸೂಚಿಸಿದ್ದಾರೆ.
ಇಂದು ಸಂಜೆ 4 ಗಂಟೆಗೆ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಮಾರಂಭ ನಡೆಯಲಿದೆ. ಸುಮಾರು 50,000 ಜನ ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಸರ್ಕಾರ ರಚಿಸಲು ಸಿದ್ಧತೆ ಆರಂಭಿಸಿದೆ. ಮಾರ್ಚ್ 25 ರಂದು ಸರ್ಕಾರ ರಚನೆಗಾಗಿ 'ಪ್ರಮಾಣ ವಚನ ಸ್ವೀಕಾರ ಸಮಾರಂಭ' ಆಯೋಜಿಸಲಾಗಿದೆ. ಪ್ರಮಾಣ ವಚನಕ್ಕೂ ಮುನ್ನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಬೆಳಗ್ಗೆ ಎಂಟರಿಂದ ಒಂಬತ್ತು ಗಂಟೆಯೊಳಗೆ ರಾಜ್ಯದ 27 ಸಾವಿರಕ್ಕೂ ಹೆಚ್ಚು ಶಕ್ತಿ ಕೇಂದ್ರದ ದೇವಸ್ಥಾನಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಲಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಇತಿಹಾಸವನ್ನು ಸೃಷ್ಟಿಸಲಿದ್ದು, ಅವರು 30 ವರ್ಷಗಳ ನಂತರ ಮೊದಲ ಬಾರಿಗೆ ಸತತ ಎರಡನೇ ಅವಧಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ವರದಿಗಳ ಪ್ರಕಾರ ಈ ಸಮಾರಂಭದಲ್ಲಿ ಒಟ್ಟು 200 ವಿವಿಐಪಿಗಳು ಭಾಗವಹಿಸಲಿದ್ದಾರೆ.
ಉತ್ತರ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಯಾದ ತಕ್ಷಣ ಸಾರ್ವಜನಿಕರಿಗೆ ರಿಟರ್ನ್ ಗಿಫ್ಟ್ ಸಿಗಲಿದೆ. ಇದಕ್ಕಾಗಿ ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಹೊಸ ಸರ್ಕಾರ ಜಾರಿಗೆ ಬಂದ ತಕ್ಷಣ ಬಡವರ ಪಿಂಚಣಿ ಹೆಚ್ಚಿಸಲಾಗುವುದು.
ಉಜ್ವಲ ಯೋಜನೆ: ಹೋಳಿ ಹಬ್ಬದಂದು ಉಚಿತ ಗ್ಯಾಸ್ ಸಿಲಿಂಡರ್ ನೀಡಲು ಯುಪಿ ಸರ್ಕಾರ ಸಿದ್ಧತೆ ನಡೆಸಿದೆ. ಇದಕ್ಕಾಗಿ ಆಹಾರ ಮತ್ತು ಜಾರಿ ಇಲಾಖೆ ಹಾಲಿ ಸರಕಾರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಿದೆ. ಪ್ರಸ್ತುತ ರಾಜ್ಯದಲ್ಲಿ ಉಜ್ವಲ ಯೋಜನೆಯ 1.65 ಕೋಟಿ ಫಲಾನುಭವಿಗಳಿದ್ದಾರೆ.
ಎಸ್ಪಿ ಸರ್ಕಾರದಲ್ಲಿ ಅಜಂಖಾನ್ ಎಮ್ಮೆ ಹುಡುಕಿ ಹುಡುಕಿ ಸುಸ್ತಾಗಿದ್ದ ಯುಪಿ ಪೊಲೀಸರು ಈಗ ಯೋಗಿ ಸರ್ಕಾರದಲ್ಲಿ ಮೇಕೆಗಳನ್ನು ಹುಡುಕುತ್ತಿದ್ದಾರೆ. ಸದ್ಯ ಕಳ್ಳತನವಾಗಿರುವ ತಮ್ಮ ಮೇಕೆಗಳನ್ನು ಪತ್ತೆ ಮಾಡಕೊಡುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.