ಚುನಾವಣಾ ಫಲಿತಾಂಶದ ನಂತರ ಯೋಗಿ ಆದಿತ್ಯನಾಥ್ ಅವರು ಇಂದು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಇದರ ನಂತರ, ಅವರು ಯುಪಿಯಲ್ಲಿ ಸರ್ಕಾರ ರಚಿಸಲು ಹಕ್ಕು ಸಾಧಿಸಬಹುದು.
ದೆಹಲಿಯಲ್ಲಿನ ಅಧಿಕಾರದ ಗದ್ದುಗೆ ಉತ್ತರ ಪ್ರದೇಶದಿಂದಲೇ ನಿರ್ಧರಿತವಾಗುವಂತದ್ದು ಎನ್ನುವ ಮಾತು ಯಾವಾಗಲೂ ದೇಶದ ರಾಜಕಾರಣದಲ್ಲಿ ಚಾಲ್ತಿಯಲ್ಲಿರುವಂತಹದ್ದು, ಇಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಪಕ್ಷವು ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವುದನ್ನು ನಾವು ಈ ಹಿಂದಿನಿಂದಲೂ ನೋಡುತ್ತಾ ಬಂದಿದ್ದೇವೆ.ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬಂದಿರುವುದು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿನ ಅದರ ಲೆಕ್ಕಾಚಾರಕ್ಕೆ ಈ ಫಲಿತಾಂಶ ಮತ್ತಷ್ಟು ಬಲ ನೀಡಲಿದೆ.
ಚುನಾವಣೆ ವಿಜಯದ ನಂತರ ಪ್ರಧಾನಿ ಮೋದಿ(Narendra Modi) ಭಾರತ್ ಮಾತಾ ಕೀ ಜೈ ಘೋಷಣೆಯೊಂದಿಗೆ ಭಾಷಣ ಆರಂಭಿಸಿದರು. ಇಂದು ಸಂಭ್ರಮದ ದಿನವಾಗಿದೆ ಎಂದರು. ಇದು ಪ್ರಜಾಪ್ರಭುತ್ವದ ಆಚರಣೆ. ಈ ಚುನಾವಣೆಯಲ್ಲಿ ಭಾಗವಹಿಸಿದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದರು.
UP Eelction Results: ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಯುಪಿ ಅಧಿಕಾರ ಹಿಡಿಯಲಿದ್ದಾರಾ? ಇದು ಇಂದಿನ ಬಹುದೊಡ್ಡ ಪ್ರಶ್ನೆ, ಇದರ ಅಧಿಕೃತ ಫಲಿತಾಂಶ ಕೆಲವೇ ಗಂಟೆಗಳ ನಂತರ ತಿಳಿಯುತ್ತದೆ, ಆದರೆ ಉತ್ತರ ಪ್ರದೇಶದಲ್ಲಿ ಮತ್ತೆ ಕಮಲ ಅರಳಿದೆಯೇ, ಯೋಗಿ ಮತ್ತೆ ಬರುತ್ತಾರಾ ಎಂಬ ಬಗ್ಗೆ ಜ್ಯೋತಿಷಿಗಳು ಕೂಡ ಭವಿಷ್ಯ ನುಡಿದಿದ್ದಾರೆ.
Punjab Assembly Elections 2022: 'ನನ್ನ ಸಹೋದರನಿಗಾಗಿ ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಬಲ್ಲೆ ಮತ್ತು ನನಗಾಗಿ ಅವನು ಕೂಡ ಮಾಡಬಹುದು' ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ. ಹೋರಾಟ ಇರುವುದು ಬಿಜೆಪಿಯಲ್ಲಿಯೇ ಹೊರತು ಕಾಂಗ್ರೆಸ್ನಲ್ಲಿಲ್ಲ. ಯೋಗಿ-ಮೋದಿ ಮತ್ತು ಅಮಿತ್ ಶಾ ನಡುವೆ ಹಿತಾಸಕ್ತಿ ಸಂಘರ್ಷ ಇರಬಹುದು ಎಂದು ಪ್ರಿಯಾಂಕಾ ಹೇಳಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರು ಯುಪಿ ವಿಧಾನಸಭೆ ಚುನಾವಣೆಯಲ್ಲಿ ಫೆಬ್ರವರಿ 4 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಗೋರಖ್ಪುರ ಜಿಲ್ಲೆಯ ಸದರ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ (ಜನವರಿ 29) ಮುಜಫರ್ನಗರ ಗಲಭೆಯಲ್ಲಿ ನೂರಾರು ಹಿಂದೂಗಳ ಹತ್ಯೆಗೆ ರಾಜ್ಯದಲ್ಲಿ ಸಮಾಜವಾದಿ ಪಕ್ಷದ ಆಡಳಿತವನ್ನು ದೂಷಿಸಿದ್ದಾರೆ ಮತ್ತು ಕೆಂಪು ಸಮಾಜವಾದಿ ಟೋಪಿಯನ್ನು ನಿಜವಾಗಿಯೂ ರಾಮಭಕ್ತರ ರಕ್ತದಿಂದ ಚಿತ್ರಿಸಲಾಗಿದೆ ಎಂದು ಹೇಳಿದರು. ಬಾಗ್ಪತ್ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.
ಉತ್ತರ ಪ್ರದೇಶದ ಮತದಾರರು ರೈತರ ಕಲ್ಯಾಣದ ಬಗ್ಗೆ ಮಾತನಾಡುವವರಿಗೆ ಮಾತ್ರ ಒಲವು ತೋರುತ್ತಾರೆ ಮತ್ತು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಣದಲ್ಲಿ ತೊಡಗುವವರಿಗೆ ಪ್ರಯೋಜನವಾಗುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್ಪುರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಯೋಗಿ ಸರ್ಕಾರ ರಾಜ್ಯದ ರೈತರಿಗೆ ಭರ್ಜರಿ ಗಿಫ್ಟ್ ನೀಡಿದೆ. ಯುಪಿ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಅವರು ರೈತರಿಗೆ ವಿದ್ಯುತ್ ಬೆಲೆಯನ್ನು ಅರ್ಧದಷ್ಟು ಇಳಿಸುವುದಾಗಿ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.