ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು. ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದುವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
Yuva Nidhi Scheme: ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬ ಕ್ಕೆ 4-5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.
Yuva Nidhi Scheme 2023 Online Apply: ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ₹3000, ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ಈ ಯೋಜನೆಯ ಲಾಭ ಪಡೆಯಬಹುದು.
Yuva Nidhi Eligibility criteria: ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.
ಸಿದ್ದರಾಮಯ್ಯ ಮತ್ತು ಡಿಕೆಶಿ ಇವರಿಬ್ಬರ ಕುರ್ಚಿ ಕದನದಲ್ಲಿ ಇಡೀ ರಾಜ್ಯವೇ ಬಲಿಯಾಗುತ್ತಿದೆ. ಬೆಂಗಳೂರಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಡಿಸಿಎಂ ಡಿಕೆ ಸಾಹೇಬರು ಲ್ಯಾಂಡ್ ಮಾಫಿಯಾ, ರಿಯಲ್ ಎಸ್ಟೇಟ್ ದಂಧೆ ನಡೆಸಿ ಲೂಟಿ ಹೊಡೆಯಲು ಕನಕಪುರವನ್ನು ಕರ್ನಾಟಕದ ರಾಜಧಾನಿಯನ್ನಾಗಿ ಬೇಕಾದರೂ ಮಾಡಬಹುದೇನೋ? ಎಂದು ಬಿಜೆಪಿ ಟೀಕಿಸಿದೆ.
ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ 5 ವಿದ್ಯುತ್ ಶಕ್ತಿ ಪೂರೈಕೆ ಕಂಪನಿಗಳು ಈಗಾಗಲೇ 63,000 ಕೋಟಿ ರೂ. ಸಾಲದ ಸುಳಿಯಲ್ಲಿ ಸಿಲುಕಿವೆ. ಈ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ 85,000 ಕೋಟಿ ರೂ. ಸಾಲವನ್ನು ಪಡೆಯಲು ಈಗಾಗಲೇ ಆರ್ಥಿಕ ಇಲಾಖೆಗೆ ಸೂಚಿಸಿರುವುದನ್ನು ಗಮನಿಸಿದಾಗ ರಾಜ್ಯವು ಸಂಪೂರ್ಣವಾಗಿ ದಿವಾಳಿಯತ್ತ ಸಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ.
Congress Guarantee Schemes: ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂಬ ಆರೋಪ ಶುದ್ಧ ಸುಳ್ಳು. ಆರೋಗ್ಯ, ಶಿಕ್ಷಣ, ಕೃಷಿ ಮತ್ತು ವಸತಿ ಕ್ಷೇತ್ರದ ಯೋಜನೆಗಳು ಕಾಲಬದ್ಧವಾಗಿ ಜಾರಿಗೊಳ್ಳುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
#ATMSarkaraದ ತುಘಲಕ್ ಆಡಳಿತವು ರಾಜ್ಯವನ್ನು ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ತಳ್ಳಿದ್ದು, ಬೊಕ್ಕಸ ಬರಿದು ಮಾಡಿ ಕರ್ನಾಟಕವನ್ನು ದಿವಾಳಿ ಮಾಡಲಿರುವುದು ದುರಾದೃಷ್ಟವಶಾತ್ ನಿಶ್ಚಿತವೆಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ಕಣ್ಕಟ್ಟು ಮಾಡುವುದು, ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು, ಕೋಮುದ್ವೇಷದ ವಿಷಬೀಜ ಬಿತ್ತಿ ನೀರೆರೆಯುವುದು ಮತ್ತು ದಿಟ್ಟ ಪ್ರಶ್ನೆಗಳು ಎದುರಾದಾಗ ಜಾಗ ಖಾಲಿ ಮಾಡುವುದು. ಇವು ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು ಎಂದು ಬಿಜೆಪಿ ಟೀಕಿಸಿದೆ.
Congress Guarantee Schemes: ಈ 3 ತಿಂಗಳಲ್ಲಿ ಸರ್ಕಾರದ ಬಗ್ಗೆ ನೂರು ರೀತಿಯ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರವೊಂದು ಆಡಳಿತಕ್ಕೆ ಬಂದು 3 ತಿಂಗಳೊಳಗೆ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ಕುಟುಕಿದೆ.
Congress Guarantee Schemes: ಮುಖ್ಯಮಂತ್ರಿ ಸಿದ್ದರಾಮಯ್ಯರು ಚುನಾವಣೆಗೂ ಮುನ್ನ ಕಾಕಾ ಪಾಟೀಲ್ಗೂ ಫ್ರೀ ಮಹಾದೇವಪ್ಪ ನಿಂಗೂ ಫ್ರೀ ಎಂದು ಪುಂಗಿ ಊದಿ ರಾಜ್ಯದ ಜನರ ಕಿವಿ ಮೇಲೆ ಕಂಡೀಷನ್ ಅಪ್ಲೈ ಎನ್ನುವ ಹೂವನ್ನು ಲೀಲಾಜಾಲವಾಗಿ ಇಟ್ಟರು ಎಂದು ಬಿಜೆಪಿ ಟೀಕಿಸಿದೆ.
Congress Guarantee Schemes: ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಬೆಲೆ ಏರಿಕೆ & ಹಣದುಬ್ಬರ ತಡೆಯಲು ವಿಫಲವಾಗಿದೆ. ಸಾಮಾನ್ಯ ಜನರು, ಮಧ್ಯಮ ವರ್ಗದವರು & ಬಡ ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದೆ ಎಂದು CM ಸಿದ್ದರಾಮಯ್ಯ ತಿಳಿಸಿದರು.
ಅನ್ಯ ಪಕ್ಷಗಳ ಶಾಸಕರು ಕಾಂಗ್ರೆಸ್ ಸೇರುವ ವಿಚಾರದ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ. ನಾವು ಬೇರೆ ಪಕ್ಷಗಳ ಶಾಸಕರನ್ನು ಕರೆದುಕೊಳ್ಳುವುದಕ್ಕಿಂತ ನಮ್ಮ ಮತ ಪ್ರಮಾಣ ಹೆಚ್ಚಿಸಿಕೊಳ್ಳುವತ್ತ ಹೆಚ್ಚು ಗಮನಹರಿಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ನಮ್ಮ ರೈತರ ಹಿತ ಕಡೆಗಣಿಸಿದೆ. ಸರ್ವಪಕ್ಷ ಸಭೆಯಲ್ಲೂ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎಂದಾಗಲೇ ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡಬೇಕಿತ್ತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Anna Bhagya Scheme: 31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳ ಪಡಿತರದಾರದ ಖಾತೆಗೆ ಹಣ ಸಂದಾಯವಾಗಿದ್ದು, ಇನ್ನು 5 ದಿನಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ತಲುಪಲಿದೆ.
ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದೆ ನಮ್ಮ ಸರ್ಕಾರ. ಸಾಕ್ಷಿ, ಪುರಾವೆ ಕೇಳುತ್ತಿದ್ದವರಿಗೆ ತನಿಖೆಯ ನಂತರ ಉತ್ತರ ಸಿಗಲಿದೆ, ಉತ್ತರವಷ್ಟೇ ಅಲ್ಲ ಶಿಕ್ಷೆಯೂ ಸಿಗಲಿದೆ! ಎಂದು ಕಾಂಗ್ರೆಸ್ ಎಚ್ಚರಿಸಿದೆ.
ಪ್ರವಾಹ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ, ಸ್ಥಳೀಯ ಮಟ್ಟದಲ್ಲಿ ಲಭ್ಯವಿರಬೇಕಾಗಿದ್ದ ಶಾಸಕರನ್ನು ಒತ್ತಾಯಪೂರ್ವಕವಾಗಿ ಬೆಂಗಳೂರಿಗೆ ಕರೆಸಿ ಸಿದ್ದರಾಮಯ್ಯನವರು ಹೊತ್ತಲ್ಲದ ಹೊತ್ತಲ್ಲಿ ಶಾಸಕಾಂಗ ಸಭೆ ನಡೆಸಿದ್ದರು ಎಂದು ಬಿಜೆಪಿ ಕಿಡಿಕಾರಿದೆ.
Congress Government Guarantee Schemes: ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ ಎಂದು ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.
Congress Guarantee Schemes: ಸಿಎಂ ಸಿದ್ದರಾಮಯ್ಯ ಸಾಹೇಬರು, ಗ್ಯಾರಂಟಿಗಳಿಗೆ ಕಂಡೀಷನ್ ಹಾಕಲು ಹಣಕಾಸು ಇಲಾಖೆ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.