ರೈತ ಬೆಳೆ ಸಮೀಕ್ಷೆ ಆ್ಯಪ್ ಯಶಸ್ವಿ: ಪ್ರಾಯೋಗಿಕ ಹಂತದಲ್ಲಿ ಶೇ. 88ರಷ್ಟು ಪ್ರಗತಿ

ಮಳೆ ಮತ್ತು ನೆಟ್ವರ್ಕ್ ಸಮಸ್ಯೆ ಆರಂಭಿಕ ಹಂತದಲ್ಲಿ ಕಂಡುಬಂದಿತ್ತಾದರೂ ಇವೆಲ್ಲವನ್ನು ಸರಿಪಡಿಸಿಕೊಂಡು ಹಾಗೂ ರಾಜ್ಯದ್ಯಾಂತ ಬೆಳೆ ಸಮೀಕ್ಷೆಯನ್ನು ಉತ್ಸವದಂತೆ ಪರಿಗಣಿಸಿದ್ದರಿಂದ ಹಾಗೂ ಕೃಷಿ ಸಚಿವರು ಮತ್ತು ಇಲಾಖೆ ರೈತ ಬೆಳೆ ಸಮೀಕ್ಷೆ ಆ್ಯಪ್ ಗೆ ಹೆಚ್ಚಿನ ಒತ್ತು ನೀಡಿದ್ದರು. 

Last Updated : Oct 1, 2020, 09:36 AM IST
  • “ನನ್ನ ಬೆಳೆ ನನ್ನ ಹಕ್ಕು” ಎಂದು ರೈತ ಹೆಮ್ಮೆಯಿಂದ ಹೇಳುವ ಕೃಷಿ ಸಚಿವ ಬಿ.ಸಿ. ಪಾಟೀಲರ ಮಹತ್ತರ ಯೋಜನೆಯಾದ ರೈತ ಬೆಳೆ ಸಮೀಕ್ಷೆ ಆ್ಯಪ್
  • ಇದೇ ಮೊದಲ ಬಾರಿಗೆ ರೈತರೇ ಸ್ವತಃ ಬೆಳೆ ಸಮೀಕ್ಷೆ ನಡೆಸಿ ತಾವೇ ಪ್ರಮಾಣಪತ್ರ ನೀಡುವ ರೈತಬೆಳೆ ಸಮೀಕ್ಷೆ ಇದಾಗಿದೆ.
  • 2017ರಿಂದ ರಾಜ್ಯದಲ್ಲಿ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಬರೀ 3 ಸಾವಿರ ಪ್ಲಾಟ್ ಗಳು ಸಮೀಕ್ಷೆಯಾಗಿದ್ದವು.
ರೈತ ಬೆಳೆ  ಸಮೀಕ್ಷೆ ಆ್ಯಪ್ ಯಶಸ್ವಿ: ಪ್ರಾಯೋಗಿಕ ಹಂತದಲ್ಲಿ ಶೇ. 88ರಷ್ಟು ಪ್ರಗತಿ title=

ಬೆಂಗಳೂರು: “ನನ್ನ ಬೆಳೆ ನನ್ನ ಹಕ್ಕು” ಎಂದು ರೈತ ಹೆಮ್ಮೆಯಿಂದ ಹೇಳುವ ಕೃಷಿ ಸಚಿವ ಬಿ.ಸಿ. ಪಾಟೀಲರ ಮಹತ್ತರ ಯೋಜನೆಯಾದ ರೈತ ಬೆಳೆ ಸಮೀಕ್ಷೆ ಆ್ಯಪ್ (Farmers Crop Survey App) ಸಮೀಕ್ಷೆ ಯಶಸ್ವಿಯಾಗಿದೆ ಎಂದು ಕೃಷಿ ಇಲಾಖೆ ಅಂಕಿ ಅಂಶಗಳು ತಿಳಿಸಿವೆ.

ಸೆಪ್ಟೆಂಬರ್ 23ಕ್ಕೆ ಅಂತ್ಯಗೊಂಡಿದ್ದು ಪ್ರಾಯೋಗಿಕ ಹಂತದಲ್ಲಿಯೇ ಶೇಕಡಾ 88ಕ್ಕೂ ಹೆಚ್ಚಿನ ಪ್ರಗತಿ ಸಾಧಿಸಿರುವುದು ಕೇಂದ್ರದ ಗಮನ ಸೆಳೆದಿದೆ. ಅಂದರೆ  ರೈತರೇ ಮೊಬೈಲ್  ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಈ ಯೋಜನೆ ಕಡಿಮೆ ಅವಧಿಯಲ್ಲಿಯೇ ಇಡೀ ದೇಶದ ಗಮನ ಸೆಳೆದಿದೆ. ರೈತರೇ ಬೆಳೆ ಸಮೀಕ್ಷೆ ನಡೆಸುವ ಪ್ರಾಯೋಗಿಕ ಹಂತವನ್ನು ಪರಿಚಯಿಸಲಾಗಿದ್ದು, ಇದು ಯಶಸ್ವಿಯಾಗಿದೆ ಎನ್ನಲಾಗಿದೆ.

ಇದೇ ಮೊದಲ ಬಾರಿಗೆ ರೈತರೇ ಸ್ವತಃ ಬೆಳೆ ಸಮೀಕ್ಷೆ ನಡೆಸಿ ತಾವೇ ಪ್ರಮಾಣಪತ್ರ ನೀಡುವ ರೈತಬೆಳೆ ಸಮೀಕ್ಷೆ ಇದಾಗಿದ್ದು, ಕೇವಲ 1 ತಿಂಗಳು 15 ದಿನಗಳೊಳಗೆ ಕಳೆದ 2 ವರ್ಷ ಇತಿಹಾಸವನ್ನೇ ಈ ಸಮೀಕ್ಷೆ ಬದಲಿಸಿದೆ. ಕಳೆದ ಆಗಸ್ಟ್ 15 ರಂದು ಇದಕ್ಕೆ ಚಾಲನೆ ನೀಡಲಾಗಿತ್ತಾದರೂ ಆಗಸ್ಟ್ ಅಂತ್ಯದಿಂದ ಪರಿಣಾಮಕಾರಿಯಾಗಿ ಜಾರಿಯಾಗಿತ್ತು.

ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ: ಬಿ.ಸಿ. ಪಾಟೀಲ್ ನೆನಪು

ಮಳೆ ಮತ್ತು ನೆಟ್ವರ್ಕ್ ಸಮಸ್ಯೆ ಆರಂಭಿಕ ಹಂತದಲ್ಲಿ ಕಂಡುಬಂದಿತ್ತಾದರೂ ಇವೆಲ್ಲವನ್ನು ಸರಿಪಡಿಸಿಕೊಂಡು ಹಾಗೂ ರಾಜ್ಯದ್ಯಾಂತ ಬೆಳೆ ಸಮೀಕ್ಷೆಯನ್ನು ಉತ್ಸವದಂತೆ ಪರಿಗಣಿಸಿದ್ದರಿಂದ ಹಾಗೂ ಕೃಷಿ ಸಚಿವರು ಮತ್ತು ಇಲಾಖೆ ರೈತ ಬೆಳೆ ಸಮೀಕ್ಷೆ ಆ್ಯಪ್ ಗೆ ಹೆಚ್ಚಿನ ಒತ್ತು ನೀಡಿದ್ದರು. ಅಲ್ಲದೇ ಕೃಷಿ ಸಚಿವ ಬಿ.ಸಿ. ಪಾಟೀಲ್ (BC Patil) ಅವರೇ ಸ್ವತಃ ತಮ್ಮ ಜಮೀನಿನಲ್ಲಿ ನಿಂತು ಸಮೀಕ್ಷೆ ನಡೆಸಿ ಎಲ್ಲರಿಗೂ ಮಾದರಿಯಾಗಿದ್ದರು.

2017ರಿಂದ ರಾಜ್ಯದಲ್ಲಿ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಬರೀ 3 ಸಾವಿರ ಪ್ಲಾಟ್ ಗಳು ಸಮೀಕ್ಷೆಯಾಗಿದ್ದವು. ಮುಂಗಾರುಹಂಗಾಮಿಗೆ ಸರ್ಕಾರಿ ಅಧಿಕಾರಿಗಳನ್ನು ಉಪಯೋಗಿಸಿ ಸಮೀಕ್ಷೆ ಮಾಡಲಾಗುತ್ತಿತ್ತು. 2018ರಲ್ಲಿ ಖಾಸಗಿ ವ್ಯಕ್ತಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿತ್ತು. 2019ರಲ್ಲಿ ಪೂರ್ವ ಮುಂಗಾರು, ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕೈಗೊಂಡು 2 ಕೋಟಿ 5 ಲಕ್ಷ ಪ್ಲಾಟ್ ಗಳ ಸರ್ವೆ ಮಾಡಲಾಗಿತ್ತು. ಇದಕ್ಕಾಗಿ 4 ತಿಂಗಳ ಸಮಯಾವಾಕಾಶ ನೀಡಲಾಗಿತ್ತು.

ಆದರೆ ಈ ಬಾರಿ ರೈತರೇ (Farmers) ಸ್ವತಃ ತಾವೇ ಬೆಳೆ ಸಮೀಕ್ಷೆ ನಡೆಸುವ ಯೋಜನೆ ಇದಾಗಿದ್ದು, 1 ಕೋಟಿ 83 ಲಕ್ಷಕ್ಕೂ ಹೆಚ್ಚಿನ ಪ್ಲಾಟ್ ಗಳನ್ನು ರೈತರೇ ಅಪ್ಲೋಡ್ ಮಾಡಿದ್ದಾರೆ. 2 ಕೋಟಿ 1 0 ಲಕ್ಷ ಗುರಿಯಿದ್ದು, ಕಡಿಮೆ ಅವಧಿಯಲ್ಲಿಯೇ 1 ಕೋಟಿ 83 ಲಕ್ಷಕ್ಕೂ ಹೆಚ್ಚಿನ ಪ್ಲಾಟ್ ಗಳು ಅಂದರೆ ನಿಗದಿತ ಕಡಿಮೆ ಅವಧಿಯಲ್ಲಿ ಶೇಕಡಾ 88 ಕ್ಕೂ ಪ್ಲಾಟ್ ಸಮೀಕ್ಷೆಯಲ್ಲಿ ಅಪ್ಲೋಡ್ ಆಗಿ ಸಾಧನೆಯಾಗಿದೆ.

ನಾನು ರೈತರಿಗಾಗಿ ಜೈಲಿಗೆ ಹೋಗಿ ಬಂದಿದ್ದೇನೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಮುಂಗಾರು, ಹಿಂಗಾರು ಹಂಗಾಮಿನ ಬೆಳೆ (Crop) ಸಮೀಕ್ಷೆ ಕೈಗೊಂಡು 2 ಕೋಟಿ 5 ಲಕ್ಷ ಪ್ಲಾಟ್ ಗಳ ಸರ್ವೆ ಮಾಡಲಾಗಿತ್ತು. ಕಳೆದ ಬಾರಿ ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಿದ ದತ್ತಾಂಶದಿಂದ ಕೋವಿಡ್ 19 ಸಂದರ್ಭದಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ತಲಾ 5 ಸಾವಿರದಂತೆ 7 ಲಕ್ಷದ 29 ಸಾವಿರ ರೈತರಿಗೆ ನೇರವಾಗಿ ಅವರ ಖಾತೆಗೆ ಪರಿಹಾರ ನೀಡಲು ಅನುಕೂಲವಾಗಿದೆ.

ಕಳೆದ ಬಾರಿಯ ದತ್ತಾಂಶ ಉಪಯೋಗಿಸಿಕೊಂಡು 5ಲಕ್ಷದ 81 ಸಾವಿರದ 896 ರೈತ ಫಲಾನುಭವಿಗಳಿಗೆ 3 164.27 ಕೋಟಿ ಮೌಲ್ಯದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬತ್ತ, ರಾಗಿ, ತೊಗರಿ, ಬಿಳಿಜೋಳ ಖರೀದಿ ಮಾಡಿ ರೈತರ ಖಾತೆಗೆ ನೇರವಾಗಿ ಹಣವರ್ಗಾಯಿಸಲಾಗಿದೆ. ತೋಟಗಾರಿಕಾ ಬೆಳೆಗಳಾದ 20,292 ಹೂಬೆಳೆಗಾರರಿಗೆ 14.50 ಕೋಟಿ ರೂ. 35,819 ತರಕಾರಿ ಬೆಳೆಗಾರರಿಗೆ 31.04 ಕೋಟಿ ರೂ. 35,959 ಹಣ್ಣುಬೆಳೆಗಾರರಿಗೆ 26.55 ಕೋಟಿ ರೂ. ಒಟ್ಟು 92,070 ಫಲಾನುಭವಿಗಳಿಗೆ 72.09 ಕೋಟಿ ರೂ. ಮೌಲ್ಯದ ಪರಿಹಾರ ನೀಡಲು ಸಾಧ್ಯವಾಗಿತ್ತು.2019 ರ ಬೆಳೆ ವಿಮೆ ಯೋಜನೆಗೆ 1,33,717 ರೈತರಿಗೆ ಬೆಳೆ ಸಮೀಕ್ಷೆ ದತ್ತಾಂಶವನ್ನು ತಾಳೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ಈ ಬಾರಿಯ ದತ್ತಾಂಶವನ್ನು ಬೆಳೆ ವಿಮೆ ಯೋಜನೆ ಇತ್ಯರ್ಥಪಡಿಸಲು, ಪ್ರಾಕೃತಿಕ ವಿಕೋಪ ಹಾನಿ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಹಾರ ಪಡೆಯಲು, ರಾಜ್ಯ ಹಾಗೂ ಕೇಂದ್ರ ಬೆಳೆ ಆಧಾರಿತ ಪ್ರೋತ್ಸಾಹ ಧನ ನೀಡಲು, ರಾಜ್ಯದ ಬೆಳೆ ವಿಸ್ತೀರ್ಣ ಮರುಹೊಂದಾಣಿಕೆ ಹಾಗೂ  ಬೆಳೆ ಉತ್ಪಾದನೆ ಲೆಕ್ಕಹಾಕಲು ಬಳಸಿಕೊಳ್ಳಲಾಗುವುದು.

Trending News