Weather Forecast: ಮುಂಬೈನಲ್ಲಿ ಅಲರ್ಟ್ ಘೋಷಣೆ, ದೆಹಲಿ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆರಾಯನ ಭಾರಿ ಆರ್ಭಟ!

Weather Update- ದೆಹಲಿಯಲ್ಲಿ ಗುರುವಾರ ಸುರಿದ ಭಾರಿ ಮಳೆಯ ಬಳಿಕ ಹಲವು ಭಾಗಗಳಲ್ಲಿ ನೀರು ಜಮಾವಣೆಯ ಸಮಸ್ಯೆ ಎದುರಾಗಿದೆ. ದಿನವಿಡೀ ದೆಹಲಿಯಲ್ಲಿನ ಜಲಪ್ರಳಯದ ದೂರುಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಂಚಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀರಿನಿಂದಾಗುವ ಸಮಸ್ಯೆಯ ಕುರಿತು ಗಮನ ಹರಿಸುವಂತೆ ಕೇಳಿದೆ.  

Written by - Nitin Tabib | Last Updated : Jul 6, 2023, 10:58 PM IST
  • ಮುಂಬೈನಲ್ಲಿ ರಾತ್ರಿಯಿಡೀ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಲ್ಲಿ ಇನ್ನಷ್ಟು ಭಾರಿ ಮಳೆಯಾಗುವ ಮುನ್ಸೂಚನೆ
  • ನೀಡಿದ್ದು, 'ಆರೆಂಜ್' ಅಲರ್ಟ್ ಘೋಷಿಸಿದೆ. ಬಿಎಂಸಿ ಈ ಮಾಹಿತಿ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಬೃಹನ್‌ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಅಂಡರ್‌ಟೇಕಿಂಗ್‌ನ ಅಧಿಕಾರಿಯೊಬ್ಬರು,
  • ಸಿಯಾನ್‌ನಲ್ಲಿ ನೀರು ನಿಲ್ಲುವುದರಿಂದ ಕೆಲವು ಬಸ್‌ಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.
Weather Forecast: ಮುಂಬೈನಲ್ಲಿ ಅಲರ್ಟ್ ಘೋಷಣೆ, ದೆಹಲಿ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆರಾಯನ ಭಾರಿ ಆರ್ಭಟ! title=

Weather Update- ಉತ್ತರ ಭಾರತದಲ್ಲಿ ಮುಂಗಾರು ಮಳೆ ಭಾರಿ ಅನಾಹುತಕ್ಕೆ ಕಾರಣವಾಗುತ್ತಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೊಂದೆಡೆ ವಾಣಿಜ್ಯ ನಗರಿ ಮುಂಬೈನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಇಲಾಖೆ ಎಚ್ಚರಿಕೆ ಘೋಷಿಸಿದೆ. ಅಲ್ಲಿ ಇನ್ನಷ್ಟು ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ‘ಆರೆಂಜ್’ ಅಲರ್ಟ್ ಘೋಷಿಸಿದೆ. ಒಂದು ದಿನದ ಹಿಂದೆ ಬಿಹಾರದಲ್ಲಿ ಸುರಿದ ಭಾರಿ ಮಳೆಯ ಕಾರಣ ಸಿಡಿಲು ಬಡಿದು 15 ಮಂದಿ ಸಾವನ್ನಪ್ಪಿದ್ದರು. ಇತ್ತ ಮಳೆಯಿಂದಾಗಿ ಮಲೆನಾಡಿನ ರಾಜ್ಯಗಳಲ್ಲೂ ಪ್ರವಾಹ ಉಂಟಾಗಿದೆ. ಹಿಮಾಚಲದಲ್ಲಿ ವಿನಾಶದ ದೃಶ್ಯಗಳು ಗೋಚರಿಸುತ್ತಿವೆ.

ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎನ್ನಲಾಗಿದೆ.

ದೆಹಲಿಯಲ್ಲಿ ಗುರುವಾರ ಸುರಿದ ಭಾರಿ ಮಳೆಯ ನಂತರ ನೀರು ಜಮಾವಣೆಗೊಂಡ ಸಮಸ್ಯೆ ಕಾಣಿಸಿಕೊಂಡಿದೆ. ದಿನವಿಡೀ ದೆಹಲಿಯಲ್ಲಿನ ಜಲಪ್ರಳಯದ ದೂರುಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀರಿನ ಸಮಸ್ಯೆಯ ಬಗ್ಗೆ ಗಮನ ಹರಿಸುವಂತೆ ಕೇಳಿದೆ.

ಇದನ್ನೂ ಓದಿ-Tech News: ಈ ದಿನ ಬಾಹ್ಯಾಕಾಶಕ್ಕೆ ಉಡಾವಣೆಗೊಳ್ಳಲಿದೆ ಚಂದ್ರಯಾನ 3, ಮಾಹಿತಿ ನೀಡಿದ ಇಸ್ರೋ

ಮುಂಬೈನಲ್ಲಿ 'ಆರೆಂಜ್' ಅಲರ್ಟ್
ಮುಂಬೈನಲ್ಲಿ ರಾತ್ರಿಯಿಡೀ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಲ್ಲಿ ಇನ್ನಷ್ಟು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, 'ಆರೆಂಜ್' ಅಲರ್ಟ್ ಘೋಷಿಸಿದೆ. ಬಿಎಂಸಿ ಈ ಮಾಹಿತಿ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಬೃಹನ್‌ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಅಂಡರ್‌ಟೇಕಿಂಗ್‌ನ ಅಧಿಕಾರಿಯೊಬ್ಬರು, ಸಿಯಾನ್‌ನಲ್ಲಿ ನೀರು ನಿಲ್ಲುವುದರಿಂದ ಕೆಲವು ಬಸ್‌ಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ-Tech Tips: ನಿಮ್ಮ ಸ್ಮಾರ್ಟ್ ಫೋನ್ ನಲ್ಲಿಯೂ ಇಂಟರ್ನೆಟ್ ಸರಿಯಾಗಿ ವರ್ಕ್ ಆಗ್ತಿಲ್ಲವೇ?

ಇನ್ನೊಂದೆಡೆ ಭಾರತೀಯ ಹವಾಮಾನ ಇಲಾಖೆಯ (IMD) ಮುಂಬೈ ಕೇಂದ್ರವು ಬುಧವಾರ ಸಂಜೆ ತನ್ನ 'ಜಿಲ್ಲಾ ಮುನ್ಸೂಚನೆ ಮತ್ತು ಎಚ್ಚರಿಕೆ' ಯಲ್ಲಿ ಮುಂಬೈಗೆ 'ಆರೆಂಜ್' ಅಲರ್ಟ್ ನೀಡಿದೆ, ಪ್ರತ್ಯೇಕ ಸ್ಥಳಗಳಲ್ಲಿ "ಭಾರೀ ಯಿಂದ ಅತಿ ಭಾರೀ ಮಳೆ" ಎಂದು ಮುನ್ಸೂಚನೆ ನೀಡಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News