ಮದುವೆಗೆ ಹೋದವರಿಗೆ ಕಾದಿತ್ತು ಜವರಾಯನ ಅಟ್ಟಹಾಸ

  • Zee Media Bureau
  • Jun 2, 2022, 07:25 PM IST

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಬಳಿ ಕಳೆದ ರಾತ್ರಿ ಅಪಘಾತವಾಗಿದೆ. ಕಲಬುರಗಿಯಲ್ಲಿ ಮದುವೆ ಮುಗಿಸಿ ಹಾವನೂರ ಗ್ರಾಮಕ್ಕೆ ತೆರಳುತ್ತಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಸಿದ್ದಮ್ಮ ಮತ್ತು ಶಿವಕುಮಾರ ಎನ್ನುವವರಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು 15 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿಯ ಟ್ರಾಫಿಕ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.

Trending News