ಆಗಸ್ಟ್ 19.. ಶ್ರೀ ಕೃಷ್ಣ ಜನ್ಮಾಷ್ಟಮಿ. ದೇಶದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಸಡಗರದಿಂದ ಆಚರಿಸಲಾಗುತ್ತಿದೆ. ಪುಟ್ಟ ಪುಟ್ಟ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷ ಹಾಕಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನ ಸಂಭ್ರಮಿಸಲಾಗುತ್ತಿದೆ. ಇದೇ ಶುಭ ಸಂದರ್ಭದಲ್ಲಿ ಕನ್ನಡ ನಟಿ.. ‘ಚೆಲುವಿನ ಚೆತ್ತಾರ’ ಸಿನಿಮಾ ಖ್ಯಾತಿಯ ಅಮೂಲ್ಯ ಹಾಗೂ ಜಗದೀಶ್. ಆರ್. ಚಂದ್ರ ದಂಪತಿ ತಮ್ಮ ಅವಳಿ ಮಕ್ಕಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.