ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾಗ ಆನೆ ಮತ್ತು ಅದರ ಮರಿಯ ಬಾಲ ಹಾಗೂ ಸೊಂಡಿಲಿಗೆ ಗಾಯವಾಗಿತ್ತು. ಇದನ್ನು ಗಮನಿಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದರು. ಸದ್ಯ ರಾಹುಲ್ ಪತ್ರಕ್ಕೆ ಸ್ಪಂಧಿಸಿರುವ ಸಿಎಂ ಬೊಮ್ಮಾಯಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆನೆಗೆ ಚಿಕಿತ್ಸೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.