ಲೋಕಸಭೆ ಚುನಾವಣೆಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮುಂಗಡ ಪತ್ರದ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ.ಬಜೆಟ್ ಅಧಿವೇಶನಕ್ಕೆ ಸಂಸತ್ತು ಸಜ್ಜಾಗಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಉಭಯ ಸದನಗಳನ್ನು ಉದ್ದೇಶಿಸಿ, ಮಾತನಾಡಲಿದ್ದಾರೆ.