ಸಚಿವ ಮುರುಗೇಶ್ ನಿರಾಣಿ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಮಾತಿನ ಫೈಟ್‌ ತಾರಕಕ್ಕೇರುತ್ತಿದೆ. ಈ ನಡುವೆ ನಿರಾಣಿ ಸಹೋದರ ಎಂಟ್ರಿ ಕೊಟ್ಟಿದ್ದು, ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯತ್ನಾಳ್‌ ಕಟು ಮಾತಿನಿಂದ ನಿರಾಣಿ ಸಹೋದರ ಸಂಗಮೇಶ್ ನಿರಾಣಿಯವರನ್ನು ಕೆರಳಿಸಿದ್ದು, ಯತ್ನಾಳ್ ವಿರುದ್ಧ ಗರಂ ಆಗಿದ್ದಾರೆ.