ಉದಯಪುರದಲ್ಲಿ ನಡೆದಿರೋ ಹಿಂದೂ ಟೈಲರ್‌ ಹತ್ಯೆ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉದಯಪುರದಲ್ಲಿ ನಡೆದಿರೋದು ಹೇಯ ಕೃತ್ಯ. ಕೊಲೆ ಮಾಡಿದವರನ್ನು ಗಲ್ಲಿಗೇರಿಸಬೇಕು. ಈ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ.