WATCH: ಬೇಬಿಬೆಟ್ಟದಲ್ಲಿರುವ ಮಠಕ್ಕೆ ನುಗ್ಗಿ ಬೇಟೆಯಾಡಿದ ಚಿರತೆ!

ಜಿಲ್ಲೆಯ ಪಾಂಡವಪುರ ತಾಲೂಕಿನ ಐತಿಹಾಸಿಕ ಬೇಬಿ ಬೆಟ್ಟದಲ್ಲಿರುವ ಶ್ರೀ ರಾಮಯೋಗೀಶ್ವರ ಮಠದ ಮುಂಭಾಗ ಕಳೆದ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ. ಮಠಕ್ಕೆ ನುಗ್ಗಿದ ಚಿರತೆ ನಾಯಿಮರಿಯನ್ನ ಕಚ್ಚಿಕೊಂಡ ಹೋಗಿದೆ. ಈ ದೃಶ್ಯಾವಳಿಗಳು ಮಠದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮಠದ ಆವರಣದಲ್ಲಿದ್ದ ನಾಯಿ ಸತ್ತಿರುವುದನ್ನು ನೋಡಿ, ಚಿರತೆ ಬಂದಿರಬಹುದು ಎಂಬ ಅನುಮಾನದಿಂದ ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಕಳೆದ ಮಧ್ಯರಾತ್ರಿ ಮಠದ ಆವರಣದಲ್ಲಿ ಚಿರತೆ ಬಂದು ಹೋಗಿರುವ ದೃಶ್ಯ ಸೆರೆಯಾಗಿದೆ.

  • Zee Media Bureau
  • Jun 23, 2022, 11:54 AM IST

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಐತಿಹಾಸಿಕ ಬೇಬಿ ಬೆಟ್ಟದಲ್ಲಿರುವ ಶ್ರೀ ರಾಮಯೋಗೀಶ್ವರ ಮಠದ ಮುಂಭಾಗ ಕಳೆದ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ. ಮಠಕ್ಕೆ ನುಗ್ಗಿದ ಚಿರತೆ ನಾಯಿಮರಿಯನ್ನ ಕಚ್ಚಿಕೊಂಡ ಹೋಗಿದೆ. ಈ ದೃಶ್ಯಾವಳಿಗಳು ಮಠದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮಠದ ಆವರಣದಲ್ಲಿದ್ದ ನಾಯಿ ಸತ್ತಿರುವುದನ್ನು ನೋಡಿ, ಚಿರತೆ ಬಂದಿರಬಹುದು ಎಂಬ ಅನುಮಾನದಿಂದ ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಕಳೆದ ಮಧ್ಯರಾತ್ರಿ ಮಠದ ಆವರಣದಲ್ಲಿ ಚಿರತೆ ಬಂದು ಹೋಗಿರುವ ದೃಶ್ಯ ಸೆರೆಯಾಗಿದೆ.

Trending News