ರಾಜಕೀಯ ನಿಂತ ನೀರಲ್ಲ. ಯಾರೂ ಎಲ್ಲಿ ಬೇಕಾದರೂ ಹೋಗಬಹುದು. ನನಗೆ ತಿಳಿದಮಟ್ಟಿಗೆ 17 ವಲಸಿಗ ಶಾಸಕರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಹೋದರೆ ಸಚಿವ ನಾರಾಯಣಗೌಡ ಅವರು ಹೋಗಬಹುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಗದಗ ಜಿಲ್ಲೆಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.