ಕುಮಾರಸ್ವಾಮಿ ಹೋದಕಡೆಯಲ್ಲಾ ಜನರು ಸೇರುತ್ತಾರೆ, ಆದ್ರೆ ಅದು ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಯಾಗುವುದಿಲ್ಲ ಎಂಬ ಮಾತು ಈ ಚುನಾವಣೆಯಲ್ಲಿ ಬದಲಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ, 2008 ರ ಬಳಿಕ ಮೊದಲ ಬಾರಿಗೆ ಜೆಡಿಎಸ್ ಪಕ್ಷ ಚುನಾವಣೆಗೆ ಮುನ್ನ ಪಕ್ಷ ಸಂಘಟನೆ ಮಾಡುತ್ತಿದ್ದು, ನಮ್ಮ‌ ಪಂಚರತ್ನ ಯೋಜನೆಯ ಐದು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ರಾಜ್ಯದ ಜನತೆ ಜೆಡಿಎಸ್ ಪಕ್ಷಕ್ಕೆ ಅಧಿಕಾರದ ಚುಕ್ಕಾಣಿ ನೀಡುವಂತೆ ಮನವಿ ಮಾಡಿದ್ರು.