ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಹಣವನ್ನು ಅರ್ಚಕರೇ ಗುಳುಂ ಮಾಡಿದ್ದಾರೆ.. ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ತಮ್ಮ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ.. ಈ ಮೂಲಕ ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.. ಪ್ರಕರಣ ಸಂಬಂಧ ಐವರು ಅರ್ಚಕರ ವಿರುದ್ಧ FIR ದಾಖಲಾಗಿದೆ.