ಮೈಸೂರು- ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ

  • Zee Media Bureau
  • May 27, 2022, 02:34 PM IST

ರಾಜ್ಯದ ಬಿಜೆಪಿ ಸರ್ಕಾರದ ಇದೀಗ ಶಿಕ್ಷಣದ ಪಠ್ಯದಲ್ಲಿ ಕೇಸರಿಕರಣ ಮಾಡಲು ಮುಂದಾಗಿದೆ ಎಂದು ಆರೋಪಿಸಿ‌ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಇಂದು ಪ್ರತಿಭಟನೆ ನಡೆಸಿದ್ರು. ರೋಹಿತ್ ಚಕ್ರತೀರ್ಥರ ಪಠ್ಯ ಪರಿಷ್ಕರಣಾ ಸಮಿತಿ ಅಳವಡಿಸಿದ್ದ ಪಠ್ಯವನ್ನು ವಿರೋಧಿಸಿ ಅವರ ಪರಿಷ್ಕರಿಸಿರೋ ಪಠ್ಯವನ್ನು  ಸುಡುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು. ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೈಸೂರು- ಬೆಂಗಳೂರು ಹೆದ್ದಾರಿ ತಡೆದು ಹತ್ತನೇ ತರಗತಿಯ ಪುಸ್ತಕದಲ್ಲಿರುವ ಕೇಶವ ಬಲಿರಾಮ್ ಹೆಡ್ಗೇವಾರ್ ರ ಆದ ರ್ಶ ಪುರಷ ಪಠ್ಯ ಸುಟ್ಟು ಹಾಕಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 

Trending News