ಕೋಲಾರ ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಶಾಸಕ ಶ್ರೀನಿವಾಸಗೌಡ ನಿವಾಸದ ಮುಂಭಾಗ ಜೆಡಿಎಸ್ ಎಂಎಲ್ ಸಿ ಗೋವಿಂದರಾಜು ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ಚೆಹ್ನೆ ಮೂಲಕ ಗೆದ್ದಿರುವ ಶ್ರೀನಿವಾಸಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕುವ ಮೂಲಕ ಅಡ್ಡಮತದಾನ ಮಾಡಿದ್ದಾರೆ.