ಮಂತ್ರಾಲಯದ ರಾಯರ 351ನೇ ಆರಾಧನಾ ‌ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಧ್ವಜಾರೋಹಣದ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ. 2 ವರ್ಷಗಳ ಬಳಿಕ ಅದ್ಧೂರಿಯಾಗಿ ಈ ಮಹೋತ್ಸವ ನಡೆಯುತ್ತಿದ್ದು, ಈ ಬಾರಿ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ. ತುಂಗಭದ್ರ ನದಿಯಲ್ಲಿ ನೀರು ಹೆಚ್ಚಳವಾದ ಹಿನ್ನೆಲೆ ನದಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ.