ಚುನಾವಣೆಯ ಹೊಸ್ತಿಲಲ್ಲೇ ಮೀಸಲಾತಿಯೆಂಬ ಜೇನುಗೂಡಿಗೆ ಸರ್ಕಾರ ಕಲ್ಲುಹೊಡೆದಿದೆ.. ಪ್ರತಿಪಕ್ಷಗಳ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ನಿನ್ನೆಯ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸರ್ವಸಮ್ಮತ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಅನುಷ್ಠಾನಗೊಳಿಸುವ ಭರವಸೆ ನೀಡಿದೆ. ಸರ್ಕಾರದ ಈ ನಿರ್ಧಾರದಿಂದ ತಳ ಸಮುದಾಯಗಳ ಸುದೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಂತಾಗಿದೆ.