ಅಥಣಿ ತಹಶಿಲ್ದಾರ ದುಂಡಪ್ಪ ಕೋಮಾರ್ ಅವರ ವಿರುದ್ಧ ಚುನಾವಣಾ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ

  • Zee Media Bureau
  • Jun 11, 2022, 05:19 PM IST

ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ, ಅಥಣಿ ತಹಶಿಲ್ದಾರ ದುಂಡಪ್ಪ ಕೋಮಾರ್ ಅವರ ವಿರುದ್ಧ ಚುನಾವಣಾ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2022 ರ ಪರಿಷತ್ ಚುನಾವಣೆ ಪೂರ್ವದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೆತ್ರಕ್ಕೆ ಶಿಕ್ಷಕರು ಹಾಗೂ ಪದವೀಧರು ಮತದಾರ ಪಟ್ಟಿಯಲ್ಲಿ ತಮ್ಮ‌ ಹೆಸರು ನೋಂದಾಯಿಸಲು ಸಲ್ಲಿಸಿದ್ದ ಅರ್ಜಿಗಳನ್ನು ನೀಡಿದ್ದರು ಆ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸದೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅವರನ್ನು ತಕ್ಷಣವೇ ಜಾರಿಯಾಗುವಂತೆ ಚುನಾವಣಾ ಅಧಿಕಾರಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಅಥಣಿ ತಹಶೀಲ್ದಾರ್ ಹುದ್ದೆಗೆ ಗೋಠೆಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ

Trending News