Viral Video: ಪತ್ನಿಯ ಚಿಕಿತ್ಸೆಗೆಂದು ಬಂದಿದ್ದ ಹಿರಿಯ ವ್ಯಕ್ತಿಯೊಬ್ಬರಿಗೆ ವೈದ್ಯರೇ ಆಸ್ಪತ್ರೆ ತುಂಬಾ ಎಳೆದಾಡಿ ಮನಬದಂತೆ ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಛತ್ತಾರ್ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಏಪ್ರಿಲ್ 17ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ವೃದ್ದ ಪತ್ನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಆಗಮಿಸಿದ್ದ ಸುಮಾರು 77 ವರ್ಷ ವಯಸ್ಸಿನ ವೃದ್ಧನಿಗೆ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ಮನಸೋ ಇಚ್ಛೆ ಥಳಿಸಿದ್ದಾರೆ.
ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ವಯಸ್ಸಾದ ವ್ಯಕ್ತಿ ಎಂತಲೂ ನೋಡದೇ ವೃದ್ಧನನ್ನ ಆಸ್ಪತ್ರೆಯ ಆವರಣದಲ್ಲಿ ಎಳೆದೊಯ್ದು ಥಳಿಸಲಾಗಿದೆ. ಇದಲ್ಲದೆ ಆ ವೃದ್ಧನನ್ನು ಪೊಲೀಸರಿಗೆ ಹಿಡಿದುಕೊಡುವುದಾಗಿ ಬೆದರಿಕೆ ಸಹ ಹಾಕಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ಈಗ ಇರುವುದು ಮೂಲ ವರದಿ ಅಲ್ಲ, ಅಸಲಿ ವರದಿ ಸಿಎಂ ಮನೆಯಲ್ಲಿದೆ : ಪ್ರತಿಪಕ್ಷ ನಾಯಕ ಆರ್.ಅಶೋಕ
ಏನಿದು ಘಟನೆ?
मध्यप्रदेश से फिर आई शर्मनाक तस्वीर
75 साल के बुजुर्ग को छतरपुर जिला अस्पताल के डॉक्टर्स और अस्पताल स्टाफ के द्वारा ना सिर्फ लात-घूंसे मारे गए, बल्कि बेरहमी से घसीटकर अस्पताल से बाहर फेंक दिया गया।
मोहन यादव जी,
आपको कब शर्म आयेगी? pic.twitter.com/skuEOShawn— Abhay Tiwari (@AbhayIndia) April 20, 2025
77 ವರ್ಷದ ಉಧವ್ಲಾಲ್ ಜೋಷಿ ಎಂಬುವರು ತಮ್ಮ ಪತ್ನಿಯ ಹೊಟ್ಟೆಯ ರಕ್ತನಾಳ ಕಾಯಿಲೆಗಾಗಿ ಚಿಕಿತ್ಸೆ ಕೊಡಿಸಲು ಜಿಲ್ಲಾಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಲ್ಲಿ ಅದಾಗಲೇ ರೋಗಿಗಳು ತುಂಬಿ ತುಳುಕುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನೂರಾರು ಮಂದಿ ಕ್ಯೂನಲ್ಲಿದ್ದರು. ಆಸ್ಪತ್ರೆಯಲ್ಲಿ ಜನಸಂದಣಿ ನೋಡಿದ ವೈದ್ಯರು ಸಿಟ್ಟಿಗೆದ್ದು ಯಾಕೆ ಇಷ್ಟೊಂದು ಮಂದಿ ತುಂಬಿದ್ದೀರಿ ಅಂತಾ ಕೂಗಾಡಿದ್ದಾರೆ. ಈ ವೇಳೆ ಕ್ಯೂನಲ್ಲಿ ನಿಂತಿದ್ದ ವೃದ್ಧ ಉಧವ್ಲಾಲ್ ಜೋಷಿಗೆ ಓರ್ವ ವೈದ್ಯ ನೀವೇಕೆ ಸರತಿ ಸಾಲಲ್ಲಿ ನಿಂತಿದ್ದೀರಿ..? ಇಲ್ಲಿಂದ ಹೊರಡಿ ಅಂತಾ ಹೊರಕ್ಕೆ ತಳ್ಳಿದ್ದಾರೆ. ಈ ವೇಳೆ ಜೋಷಿ ತಮ್ಮ ಪತ್ನಿಗೆ ಚಿಕಿತ್ಸೆ ಕೊಡಿಸಲು ಬಂದಿದ್ದೇನೆ. ಚೀಟಿ ಸಹ ಪಡೆದಿದ್ದೇನೆ ಅಂತಾ ಹೇಳಿದರೂ ಕೇಳದ ವೈದ್ಯ ನೋಡ ನೋಡುತ್ತಲೇ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾನೆ.
ಬಳಿಕ ವೈದ್ಯರು ಆ ವೃದ್ಧನನ್ನ ಆಸ್ಪತ್ರೆಯ ತುಂಬಾ ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ಸಾರ್ವಜನಿಕರು ವೈದ್ಯರ ದೌರ್ಜನ್ಯವನ್ನ ಖಂಡಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಅಧಿಕಾರಿಗಳು ಆಗಮಿಸುತ್ತಲೇ ವೈದ್ಯರು ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆ ಕುರಿತು ಮಾತನಾಡಿದ ಉಧವ್ಲಾಲ್ ಜೋಷಿ, 'ಆಸ್ಪತ್ರೆಯಲ್ಲಿನ ಜನಸಂದಣಿಯಿಂದ ಸಿಟ್ಟಿಗೆದ್ದ ವೈದ್ಯರು, ನೀವು ಕ್ಯೂನಲ್ಲಿ ಏಕೆ ನಿಂತಿದ್ದೀರಿ ಎಂದು ಕೇಳಿದರು. ಹೆಂಡತಿಗೆ ಚಿಕಿತ್ಸೆ ಕೊಡಿಸಲು ಬಂದಿದ್ದೇನೆ ಎನ್ನುತ್ತಲೇ ವೈದ್ಯರು ನನಗೆ ಕಪಾಳಮೋಕ್ಷ ಮಾಡಿದರು. ನಂತರ ನನ್ನನ್ನ ಆಸ್ಪತ್ರೆ ಆವರಣಲ್ಲಿರುವ ಪೊಲೀಸ್ ಠಾಣೆಯ ಕಡೆಗೆ ಎಳೆದೊಯ್ದರು. ನನಗೆ ಒದ್ದು ಚೌಕಿಗೆ ಎಳೆದೊಯ್ದರು. ನನಗೆ ಹೊಡೆದು ಕನ್ನಡಕವನ್ನೂ ಒಡೆದುಹಾಕಿದ್ದಾರೆ. ನನ್ನ ಚೀಟಿಯನ್ನ ಹರಿದು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ನನ್ನ ಪತ್ನಿಯ ಮೇಲೂ ಹಲ್ಲೆ ನಡೆಸಲಾಯಿತು" ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Top 10 Series: ಭಾರತದ ಟಾಪ್ 10 ಸ್ವಚ್ಛ ಗಾಳಿ ಬೀಸುವ ಪ್ರದೇಶಗಳು
ವೈದ್ಯರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುವ ಬಡವರ ಮೇಲೆ ವೈದ್ಯರು ಯಾವ ರೀತಿಯ ದರ್ಪ ತೋರಿದ್ದಾರೆ ನೋಡಿ. ವೃದ್ಧರ ಮೇಲೆ ಹಲ್ಲೆ ಮಾಡಿದ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟಿಜನ್ಸ್ ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.