ಕುಂಭಮೇಳದಲ್ಲಿ ದೆವ್ವಗಳ ಪವಿತ್ರ ಸ್ನಾನ ? ಸಂಚಲನ ಮೂಡಿಸುತ್ತಿದೆ ವಿಡಿಯೋ

ಪ್ರತಿದಿನ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ.ಪ್ರಸ್ತುತ ಕುಂಭಮೇಳದಲ್ಲಿ ಇಲ್ಲಿಯವರೆಗೆ 70 ಕೋಟಿ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ ಎನ್ನಲಾಗಿದೆ.

Written by - Ranjitha R K | Last Updated : Mar 10, 2025, 04:27 PM IST
  • ಪ್ರಯಾಗರಾಜ್ ಮಹಾ ಕುಂಭಮೇಳಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ
  • ಫೆ. 26 ರಂದು ಮಹಾಶಿವರಾತ್ರಿಯ ಪವಿತ್ರ ಸ್ನಾನದೊಂದಿಗೆ ಮುಕ್ತಾಯಗೊಂಡಿತು.
  • ಕುಂಭಮೇಳ ಮುಗಿದ ನಂತರವೂ ಭಕ್ತರು ಇಲ್ಲಿಗೆ ಆಗಮಿಸುತ್ತಲೇ ಇದ್ದಾರೆ.
ಕುಂಭಮೇಳದಲ್ಲಿ ದೆವ್ವಗಳ ಪವಿತ್ರ ಸ್ನಾನ ? ಸಂಚಲನ ಮೂಡಿಸುತ್ತಿದೆ ವಿಡಿಯೋ

ಪ್ರಯಾಗರಾಜ್ ಮಹಾ ಕುಂಭಮೇಳಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಜನವರಿ 13 ರಂದು ಪ್ರಾರಂಭವಾದ ಕುಂಭಮೇಳವು ಫೆಬ್ರವರಿ 26 ರಂದು ಮಹಾಶಿವರಾತ್ರಿಯ ಪವಿತ್ರ ಸ್ನಾನದೊಂದಿಗೆ ಮುಕ್ತಾಯಗೊಂಡಿತು. ಕುಂಭಮೇಳ ಮುಗಿದ ನಂತರವೂ ಭಕ್ತರು ಇಲ್ಲಿಗೆ ಆಗಮಿಸುತ್ತಲೇ ಇದ್ದಾರೆ. ಪ್ರತಿದಿನ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ. ಪ್ರಸ್ತುತ ಕುಂಭಮೇಳದಲ್ಲಿ ಇಲ್ಲಿಯವರೆಗೆ 70 ಕೋಟಿ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ ಎನ್ನಲಾಗಿದೆ. ಪ್ರಯಾಗ್‌ರಾಜ್ ಕುಂಭಮೇಳವು ದೇಶದಲ್ಲಿ ಇತಿಹಾಸ ಸೃಷ್ಟಿಸಿದೆ. 

Add Zee News as a Preferred Source

144 ವರ್ಷಗಳ ನಂತರ ನಡೆದ ಈ ಮಹಾ ಕುಂಭಮೇಳದೊಂದಿಗೆ, ನಮ್ಮ ದೇಶ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಭಕ್ತರು ಪವಿತ್ರ ಸ್ನಾನ ಮಾಡಲು ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ, ಪ್ರಸ್ತುತ ಕುಂಭಮೇಳದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುವ ಅನೇಕ ವೀಡಿಯೊಗಳು ವೈರಲ್ ಆಗಿವೆ. ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳೆಲ್ಲರೂ ಪವಿತ್ರ ಸ್ನಾನ ಮಾಡಿದರು.

ಇದನ್ನೂ ಓದಿ : ರೈಲು ತಲೆ ಮೇಲೆ ಹಾದು ಹೋದರೂ ಮೃತ್ಯುಂಜಯನಂತೆ ಎದ್ದು ಬಂದ ಕುಡುಕ ಮಹಾಶಯ !ಇದು ಮದ್ಯದ ಪವರಾ ಎನ್ನುತ್ತಿರುವ ವಿಡಿಯೋ ವೀಕ್ಷಕರು !
 
ಆದರೆ, ಪ್ರಸ್ತುತ ಒಂದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ತಲ್ಲಣ ಮೂಡಿಸಿದೆ. ತ್ರಿವೇಣಿ ಸಂಗಮದಲ್ಲಿ ದೆವ್ವಗಳು ಸ್ನಾನ ಮಾಡುತ್ತಿವೆ ಎಂದು ಹೇಳುವ ವೀಡಿಯೊವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿನ  ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಡುಗೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ ಜನರ ಗುಂಪೊಂದು ಪವಿತ್ರ ಸ್ನಾನ ಮಾಡುವುದು ಕಂಡು ಬಂದಿದೆ. ಆದರೆ ಮತ್ತೊಂದೆಡೆ, ಅದನ್ನು ಹತ್ತಿರದಿಂದ ನೋಡಿದರೆ, ಅಲ್ಲಿ ಯಾರೂ ಕಾಣುವುದಿಲ್ಲ.

ಅಲ್ಲಿನ ಅಘೋರಿಯಲ್ಲಿ ಇದರ ಬಗ್ಗೆ ಮಾತನಾಡಿದರೆ, ಶಿವ ಸ್ಮಶಾನದಲ್ಲಿ ಇರುತ್ತಾನೆ. ಅವನು ಭೂತಗಳ ಒಡೆಯ. ಹಾಗಾಗಿ ಇಲ್ಲಿ ಸ್ನಾನ ಮಾಡುತ್ತಿರುವವುಗಳೆಲ್ಲವೂ ಪ್ರೇತಾತ್ಮಗಳು ಎನ್ನುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಮತ್ತೊಂದೆಡೆ, ಕೆಲವರು ಈ ವಿಡಿಯೋ ಕುಂಭಮೇಳದದ್ದಲ್ಲ.. ನಿಜವಾದ ಕಥೆ ಬೇರೆಯೇ ಇದೆ ಎಂದು ಹೇಳುವವರು ಕೂಡಾ ಇದ್ದಾರೆ. 

 

ಇದನ್ನೂ ಓದಿ : Viral Video: ಸ್ಟಂಟ್‌ ಮಾಡಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಯುವಕ! ಹೀರೋ ಎನಿಸಿಕೊಳ್ಳಲು ಹೋದವನಿಗೆ ಆಗಿದ್ದೇನು? ವಿಡಿಯೋ ನೋಡಿ.

ಈ ವೀಡಿಯೊ ವಾಸ್ತವವಾಗಿ ಬ್ರೆಜಿಲ್‌ನ ಪರಾನಾದಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಜನರು ಬೀಚ್‌ನಲ್ಲಿ ಸ್ನಾನ ಮಾಡುತ್ತಿದ್ದ ವಿಡಿಯೋ ಅದಾಗಿದ್ದು, ಅದನ್ನು ಕೆಲವರು ಉದ್ದೇಶಪೂರ್ವಕವಾಗಿ ಕುಂಭ ಮೇಳಕ್ಕೆ ಲಿಂಕ್ ಮಾಡಿ ವೈರಲ್ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. 

 

 

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 
V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News