OMG: ಫೋನ್​ ರಿಪೇರಿ ಮಾಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವತಿ..!

ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ.

Written by - Puttaraj K Alur | Last Updated : Apr 12, 2024, 11:02 PM IST
  • ಫೋನ್​ ರಿಪೇರಿ ಮಾಡಿಸಿಕೊಡಲು ಪಾಲಕರು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ
  • ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಜೈಪುರ ಮಂಡಲದ ವಲ್ಲಲ ಗ್ರಾಮದಲ್ಲಿ ಘಟನೆ
  • ಕ್ಷುಲ್ಲಕ ವಿಚಾರಕ್ಕೆ ಸೂಸೈಡ್‌ ಮಾಡಿಕೊಂಡ ಪದವಿ ಓದುತ್ತಿದ್ದ ವಿದ್ಯಾರ್ಥಿನಿ
OMG: ಫೋನ್​ ರಿಪೇರಿ ಮಾಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವತಿ..! title=
ಯುವತಿ ಆತ್ಮಹತ್ಯೆಗೆ ಶರಣು!

ನವದೆಹಲಿ: ಫೋನ್​ ರಿಪೇರಿ ಮಾಡಿಸಿಕೊಡಲು ಪಾಲಕರು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಜೈಪುರ ಮಂಡಲದ ವಲ್ಲಲ ಗ್ರಾಮದಲ್ಲಿ ನಡೆದಿದೆ. ಸೈಶುಮಾ (19) ಸೂಸೈಡ್‌ ಮಾಡಿಕೊಂಡ ಯುವತಿ.

ವಲ್ಲಲ ಗ್ರಾಮದ ಪ್ಯಾಗ ಸರಕ್ಕ ಮತ್ತು ಸ್ವಾಮಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗಳಿದ್ದಳು. ಈ ಪೈಕಿ ಸೈಶುಮಾ ಮಂಚೇರಿಯಲ್​ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಆಕೆ ಬಳಸುತ್ತಿದ್ದ ಸ್ಮಾರ್ಟ್​ಫೋನ್​ ಕೆಟ್ಟು ಹೋಗಿತ್ತು. ಹೀಗಾಗಿ ಆ ಫೋನ್ ರಿಪೇರಿ ಮಾಡಿಸಿಕೊಡುವಂತೆ ತಾಯಿ ಬಳಿ ಕೇಳಿದ್ದಳಂತೆ.

ಇದನ್ನೂ ಓದಿ: Weather Update: ದೇಶದಲ್ಲಿ ಕೆಲ ಭಾಗಗಳಲ್ಲಿ ಮುಂದುವರೆದ ಹೀಟ್‌ವೇವ್, ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಆದರೆ ತಾಯಿ ಆಕೆಗೆ ಬುದ್ಧಿವಾದ ಹೇಳಿದ್ದಳು. ʼನೀನು ಆಗಾಗ ಫೋನ್​ ಹಾಳು ಮಾಡಿಕೊಳ್ಳುತ್ತೀಯಾ,  ನಮ್ಮ ಬಳಿ ಫೋನ್‌ ರಿಪೇರಿ ಮಾಡುವಷ್ಟು ಹಣವಿಲ್ಲ. ಸ್ವಲ್ಪ ದಿನ ಸುಮ್ಮನಿರು ಅಂತಾ ಏರು ಧ್ವನಿಯಲ್ಲಿ ಬೈದು ಬುದ್ಧವಾದ ಹೇಳಿದ್ದರಂತೆ. 

ನಾನು ಕೇಳಿದ ಹಾಗೆ ತಮ್ಮ ಅಣ್ಣ ಕೇಳಿದ್ದರೆ ಕೂಡಲೇ ರಿಪೇರಿ ಮಾಡಿಸಿಕೊಡುತ್ತಿದ್ದರು. ಆದರೆ ನಾನು ಏನಾದರೂ ಕೇಳಿದರೆ ಯಾವಾಗಲೂ ಇಲ್ಲ ಅಂತಾನೇ ಹೇಳುತ್ತಾರೆ ಅಂತಾ ಸೈಶುಮಾ ನೊಂದುಕೊಂಡಿದ್ದಳಂತೆ. ಮೊಬೈಲ್‌ ರಿಪೇರಿ ಮಾಡಿಸಿಕೊಡುವುದಿಲ್ಲವೆಂದ ಪೋಷಕರ ಮಾತು ಆಕೆಗೆ ನೋವುಂಟುಮಾಡಿತ್ತು.  

ಇದನ್ನೂ ಓದಿ: Terrorist Trapped In Jammu Kashmir: ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಹತ

ಇದೇ ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ. ಮಗಳ ಸಾವಿನ ದುಃಖ ತಾಳಲಾರದೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು. 

ಕೇವಲ ಒಂದ ಮೊಬೈಲ್‌ ರಿಪೇರಿ ಮಾಡಿಸಿಕೊಡಲಿಲ್ಲವೆಂದು ಸೈಶುಮಾ ಆತ್ಮಹತ್ಯೆಯಂತಹ ದುಡುಕು ನಿರ್ಧಾರ ಕೈಗೊಂಡಿದ್ದಾಳೆ. ಸ್ಥಳಕ್ಕೆ ಸ್ಥಳೀಯ ಠಾಣಾ ಪೊಲೀಸರು ಭೇಟಿ ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News