ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಇದೀಗ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹಳಿತಪ್ಪಿದ್ದು, ಲಂಕಾದಲ್ಲಿ ಜನಾಕ್ರೋಶ ಭುಗಿಲೆದ್ದಿದೆ.


COMMERCIAL BREAK
SCROLL TO CONTINUE READING

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ರೆನಿಲ್‌ ವಿಕ್ರಮ ಸಿಂಘೆ ಸಿಂಹಳ ರಾಷ್ಟ್ರದಿಂದ ಎಸ್ಕೇಪ್ ಆಗಿದ್ದಾರೆ. ದ್ವೀಪ ರಾಷ್ಟ್ರದ ಜನರ ಆಕ್ರೋಶ ಸ್ಫೋಟಗೊಂಡಿದ್ದು, ಕೊಲೊಂಬೋದಲ್ಲಿರುವ ರೆನಿಲ್‌ ವಿಕ್ರಮ ಸಿಂಘೆ ನಿವಾಸಕ್ಕೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರವಾಯು ಪ್ರಯೋಗಿಸಿದರೂ ಪ್ರಯೋಜನವಾಗಿಲ್ಲ. ಈ ವೇಳೆ ಶ್ರೀಲಂಕಾದ ಖಾಕಿಪಡೆ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷನೆ ಸಹ ನಡೆದಿದೆ.


ಇದನ್ನೂ ಓದಿ: Sri Lanka Crisis : ಶ್ರೀಲಂಕಾದ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ.. ರಾಜಪಕ್ಸ ಪಲಾಯನ!


ಶ್ರೀಲಂಕಾ ಸರ್ಕಾರದ ವಿರುದ್ಧ ಕ್ರಿಕೆಟರ್ ಸನತ್ ಜಯಸೂರ್ಯ ಪ್ರತಿಭಟನೆ


ನಿಲ್ಲದ ಜನರ ಆಕ್ರೋಶ!


ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದೆ. ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿವಾಸಗಳನ್ನು ಪ್ರತಿಭಟನಾಕಾರರು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ರಾಷ್ಟ್ರದ ಪ್ರಕ್ಷುಬ್ಧತೆಯ ನಡುವೆ ಪ್ರಸ್ತುತ ರಾಷ್ಟ್ರಪತಿ ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.


7 ದಶಕಗಳಲ್ಲಿಯೇ ತೀವ್ರ ಆರ್ಥಿಕ ಬಿಕ್ಕಟ್ಟು


ಶ್ರೀಲಂಕಾ ತೀವ್ರ ಆರ್ಥಿಕ ಪ್ರಕ್ಷುಬ್ಧತೆಯನ್ನು ಎದುರಿಸುತ್ತಿದೆ. 22 ಮಿಲಿಯನ್ ಜನಸಂಖ್ಯೆ ಹೊಂದಿರುವ ದೇಶವು ಕಳೆದ 7 ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಶ್ರೀಲಂಕಾದಲ್ಲಿ ವಿದೇಶಿ ವಿನಿಮಯದ ಕೊರತೆಯಿದೆ, ಇದರಿಂದಾಗಿ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಅಗತ್ಯ ಆಮದುಗಳಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ನಡುವೆ ಸಾರ್ವಜನಿಕರು ಬೀದಿ ಪಾಲಾಗಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ