ಜಮೀನಿನಲ್ಲಿ ವ್ಯಾಘ್ರ ದಾಳಿಗೆ ಜಿಂಕೆ ಬಲಿ- ಪ್ರತ್ಯೇಕ ಘಟನೆಯಲ್ಲಿ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿ ಪತ್ತೆ

ಪಡಗೂರು ಅಡವಿ ಮಠದ ಶ್ರೀಗಳಿಗೆ ಸೇರಿದ ಜಮೀನಿನ ಪಕ್ಕದ ಬಯಲಲ್ಲಿ ಗುರುವಾರ ಬೆಳಗ್ಗೆ ಮೇವು ಮೇಯುತ್ತಿದ್ದ ಜಿಂಕೆಯ ಮೇಲೆ ಹುಲಿ ಏಕಾಏಕಿ ದಾಳಿ (Tiger Attack On Deer) ನಡೆಸಿ ಕುತ್ತಿಗೆ ಭಾಗಕ್ಕೆ ಬಲವಾಗಿ ಕಚ್ಚಿದೆ. 

Written by - Yashaswini V | Last Updated : May 30, 2024, 01:01 PM IST
  • ಹುಲಿ ದಾಳಿಗೆ ನರಳಿ-ನರಳಿ ಪ್ರಾಣ ಬಿಟ್ಟ ಜಿಂಕೆ
  • ಪ್ರತ್ಯೇಕ ಘಟನೆಯಲ್ಲಿ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿ ಪತ್ತೆ
  • ಅಮ್ಮನಿಗಾಗಿ ಹಾತೊರೆಯುತ್ತಿದೆ ಚಿರತೆ ಮರಿ
ಜಮೀನಿನಲ್ಲಿ ವ್ಯಾಘ್ರ ದಾಳಿಗೆ ಜಿಂಕೆ ಬಲಿ- ಪ್ರತ್ಯೇಕ ಘಟನೆಯಲ್ಲಿ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿ ಪತ್ತೆ  title=

ಚಾಮರಾಜನಗರ: ಹುಲಿ ದಾಳಿ (Tiger Attact) ನಡೆಸಿ ಜಿಂಕೆಯೊಂದನ್ನು ಕೊಂದು ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು-ಕಲ್ಲಹಳ್ಳಿ ಮಾರ್ಗ ಮಧ್ಯದ ಜಮೀನೊಂದರಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಪಡಗೂರು ಅಡವಿ ಮಠದ ಶ್ರೀಗಳಿಗೆ ಸೇರಿದ ಜಮೀನಿನ ಪಕ್ಕದ ಬಯಲಲ್ಲಿ ಗುರುವಾರ ಬೆಳಗ್ಗೆ ಮೇವು ಮೇಯುತ್ತಿದ್ದ ಜಿಂಕೆಯ ಮೇಲೆ ಹುಲಿ ಏಕಾಏಕಿ ದಾಳಿ (Tiger Attack On Deer) ನಡೆಸಿ ಕುತ್ತಿಗೆ ಭಾಗಕ್ಕೆ ಬಲವಾಗಿ ಕಚ್ಚಿದೆ. ಈ ವೇಳೆ ರೈತರು ಕೂಗಿಕೊಂಡ ಪರಿಣಾಮ ಜಿಂಕೆ ಬಿಟ್ಟು ಓಡಿ ಹೋಗಿದೆ. ನಂತರ ಜಿಂಕೆಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಕೆಲಕಾಲ ಒದ್ದಾಡಿ ಸಾವನ್ನಪ್ಪಿದೆ ಎಂದು ಸ್ಥಳೀಯ ರೈತರು ಮಾಹಿತಿ ನೀಡಿದರು‌.

ಜಿಂಕೆ ಒದ್ದಾಟದ ವೀಡಿಯೋವನ್ನು ರೈತರು ಸೆರೆ ಹಿಡಿದು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ- ಬಂಡೀಪುರ ಸಫಾರಿಯಲ್ಲಿ ಗಾಯಗೊಂಡ ವ್ಯಾಘ್ರಗಳ ದರ್ಶನ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿ ಪತ್ತೆ: 
ಪಡಗೂರು ಗ್ರಾಮದ ರೈತರೊಬ್ಬರ ಕಬ್ಬಿನ ಗದ್ದೆಯಲ್ಲಿ ತನ್ನ ಮರಿ ಬಿಟ್ಟು ಚಿರತೆ ಓಡಿ ಹೋಗಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಪಡಗೂರು ಗ್ರಾಮದ ಶಿವಕುಮಾರ್ ಎಂಬ ರೈತನ ಕಬ್ಬಿನ ಗದ್ದೆಯಲ್ಲಿ ತನ್ನ ಮರಿಯೊಂದಿಗೆ ಅಡಗಿ ಕುಳಿತಿದ್ದ ಚಿರತೆ ಬೇಟೆ ಸಂಬಂಧ ಜಮೀನಿನಲ್ಲಿ ಮರಿ ಬಿಟ್ಟು ಹೋಗಿದೆ. ಪಕ್ಕದ ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಇದು ಬೆಳಕಿಗೆ ಬಂದಿದೆ. ನಂತರ ಜಮೀನು ಮಾಲೀಕರು ಚಿರತೆ ಮರಿಯನ್ನು ಹಿಡಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದಾವಿಸಿದ ಗುಂಡ್ಲುಪೇಟೆ ಬಫರ್ ಜೋನ್ ಅರಣ್ಯಾಧಿಕಾರಿಯನ್ನು ಚಿರತೆ ಮರಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ- Viral News: ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ ಈ ಫೋಟೋ!

ಚಿರತೆ ತನ್ನ ಮರಿ ಬಿಟ್ಟು ಹೋಗಿದ್ದು, ಮತ್ತೆ ವಾಪಸ್ ಮರಿ ಹುಡುಕಿಕೊಂಡು ಬರುತ್ತದೆ ಎಂಬ ಖಚಿತತೆಯೊಂದಿಗೆ ರೈತ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಿದ್ದಾರೆ. ಜೊತೆಗೆ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News