ಪಣಜಿ: ಬಾಡಿಗೆಗೆ ಕಾರು ಪಡೆದ ಪ್ರವಾಸಿಗನೊಬ್ಬ ಅದನ್ನು ಗೋವಾದ ಬೀಚ್‍ನಲ್ಲಿ ಮುಳುಗಿಸಿ ಹುಚ್ಚಾಟ ಮೆರೆದಿದ್ದಾನೆ. ದೆಹಲಿ ಮೂಲದ ಲಲಿತ್ ಕುಮಾರ್ ದಯಾಳ್ ಎಂಬಾತನೇ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಪೇಚಿಗೆ ಸಿಲುಕಿದ್ದಾನೆ.


COMMERCIAL BREAK
SCROLL TO CONTINUE READING

ಬಾಡಿಗೆಗೆ ಕಾರು ಪಡೆದುಕೊಂಡಿದ್ದ ಲಲಿತ್ ಕುಮಾರ್ ಅದನ್ನು ಕಡಲ ತೀರದಲ್ಲಿ ಚಲಾಯಿಸಿದ್ದಾನೆ. ಈ ವೇಳೆ ಕಾರು ನೀರಿನಲ್ಲಿ ಮುಳುಗಡೆಯಾಗಿದೆ. ಹಣಜುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೀಚ್‍ನಲ್ಲಿ ವಾಹನ ಚಲಾಯಿಸಿದ ಪ್ರವಾಸಿಗರನ್ನು ಬಂಧಿಸಿರುವ ಪೊಲೀಸರು ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: 46 ವರ್ಷಗಳಿಂದ ತೇಲುತ್ತಿದ್ದ ಪ್ರಸಿದ್ಧ ರೆಸ್ಟೋರೆಂಟ್‌ ಅಂತ್ಯ: ಸೆಲೆಬ್ರಿಟಿಗಳ ಫೇವರೇಟ್‌ ಸ್ಪಾಟ್‌ ಕಥೆ ಇನ್ನೇನು?


ಟಿಕ್ ಟಾಕ್ ಗೆ ಸೆಡ್ಡು ಹೊಡೆದ ಯೂಟ್ಯೂಬ್, ಶಾರ್ಟ್ಸ್ ಗಳಿಂದ ಗಳಿಸಿದ ಆದಾಯ ಎಷ್ಟು ಗೊತ್ತಾ?


ಇದಲ್ಲದೆ ಕಾರು ಮಾಲೀಕರಾದ ಸಂಗೀತಾ ಗಾವಡಾಳ್ಕರ್ ವಿರುದ್ಧ ಮಾಪುಸಾದ ಪೊಲೀಸರು ಆರ್‌ಟಿಒಗೆ ವರದಿ ಸಲ್ಲಿಸಿದ್ದಾರೆ. ವಾಹನ ಮಾಲೀಕರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ದೇಶದ ದಕ್ಷಿಣ ಭಾಗದಲ್ಲಿ ಮುಂಗಾರು ಮಳೆ ಅಬ್ಬರವಿದ್ದು, ಗೋವಾದ ಭಾಗಗಳಲ್ಲಿಯೂ ಮಳೆಯಾಗುತ್ತಿದೆ. ಹೀಗಾಗಿ ಗೋವಾದ ಕಡಲತೀರಗಳಲ್ಲಿ ವಾಹನ ಚಲಾವಣೆ ನಿಷೇಧಿಸಲಾಗಿದೆ. ಆದರೆ, ಹೊರಗಿನ ಪ್ರವಾಸಿಗರು ನಿಷೇಧಿತ ಪ್ರದೇಶಗಳಲ್ಲಿ ವಾಹನ ಚಲಾಯಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.