ರೈಲು ನಿಲ್ದಾಣದಲ್ಲಿ ರೈಲು ನಿಂತಾಗ, ಅನೇಕ ಪ್ರಯಾಣಿಕರು ಅದಕ್ಕೂ ಮೊದಲು ಹತ್ತಲು ಬಯಸುತ್ತಾರೆ. ಅನೇಕ ಪ್ರಯಾಣಿಕರು ಸಹ ನಿಲ್ಲುವ ಮೊದಲು ತರಾತುರಿಯಲ್ಲಿ ಇಳಿಯುತ್ತಿರುತ್ತಾರೆ. ಆದರೆ ಅಂತಹ ಕೃತ್ಯವು ಕೆಲವೊಮ್ಮೆ ಜೀವಕ್ಕೆ ಅಪಾಯವನ್ನುಂಟು ಮಾಡುತ್ತದೆ. ಚಲಿಸುತ್ತಿದ್ದ ರೈಲು ಮತ್ತು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ನಡುವೆ ವ್ಯಕ್ತಿಯೊಬ್ಬ ಬಿದ್ದಿರುವ ಇಂತಹ ಪ್ರಕರಣ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದೆ. ಆದರೆ ಅದೃಷ್ಟವಶಾತ್ ಆರ್‌ಪಿಎಫ್ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: King Cobra with Nagamani : ನಾಗಮಣಿ ರಕ್ಷಿಸುತ್ತಿರುವ ಕಿಂಗ್ ಕೋಬ್ರಾ.. ಅಪರೂಪದ ದೃಶ್ಯ ವೈರಲ್!


ಈ ಘಟನೆ ತಮಿಳುನಾಡಿನ ಕೊಯಮತ್ತೂರು ರೈಲು ನಿಲ್ದಾಣದಲ್ಲಿ ನಡೆದಿದೆ. ಇದರ ಸಿಸಿಟಿವಿ ವಿಡಿಯೋವನ್ನು ಆರ್‌ಪಿಎಫ್ ಇಂಡಿಯಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಶೌರ್ಯ ಮತ್ತು ಧೈರ್ಯದ ಮತ್ತೊಂದು ಕಥೆ ಎಂದು ಬರೆಯಲಾಗಿದೆ.


ಆರ್‌ಪಿಎಫ್ ಎಎಸ್‌ಐ ಅರುಣ್‌ಜೀತ್ ಮತ್ತು ಲೇಡಿ ಹೆಚ್‌ಸಿ ಪಿಪಿ ಮಿನಿ, ತಮ್ಮ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸದೆ ಕೊಯಮತ್ತೂರು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಾಗ ಪ್ರಯಾಣಿಕರನ್ನು ಕಾಪಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.


ಲಾಟರಿಯಲ್ಲಿ 25 ಕೋಟಿ ರೂ. ಗೆದ್ದರೂ ಮನಶಾಂತಿ ಇಲ್ಲ : ಶತ್ರುಗಳು ಹೆಚ್ಚಾದರು..!


ಇದಾದ ತಕ್ಷಣ ಅಲ್ಲಿದ್ದ ಕೆಲವು ಆರ್‌ಪಿಎಫ್ ಸಿಬ್ಬಂದಿ ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ನಂತರ, ಭಾಗಶಃ ಗಾಯಗೊಂಡ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಈ ಘಟನೆಯ ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.