ಅಮೆರಿಕದಲ್ಲಿ ಭೀಕರ ಚಂಡಮಾರುತ: 21 ಜನರು ಬಲಿ, 6.50 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ!!

US Tornado: ಅಮೆರಿಕದಲ್ಲಿ ಬೀಸಿದ ಭೀಕರ ಚಂಡಮಾರುತವು ಭಾರೀ ವಿನಾಶವನ್ನುಂಟುಮಾಡಿದೆ. ಈವರೆಗೆ ಚಂಡಮಾರುತದಿಂದಾಗಿ 21 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, 6.5 ಲಕ್ಷ ಮನೆಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಎಂದು ಹೇಳಲಾಗುತ್ತಿದೆ.

Written by - Puttaraj K Alur | Last Updated : May 17, 2025, 10:28 PM IST
  • ಅಮೆರಿಕದ ಎರಡು ರಾಜ್ಯಗಳಲ್ಲಿ ಭೀಕರ ಚಂಡಮಾರುತದಿಂದಾಗಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ
  • ಶುಕ್ರವಾರದ ಭೀಕರ ಸುಂಟರಗಾಳಿಯಿಂದ ಸುಮಾರು 5,000ಕ್ಕೂ ಹೆಚ್ಚು ಕಟ್ಟಡಗಳು ಹಾನಿಯಾಗಿವೆ
  • ಈ ಚಂಡಮಾರುತದಿಂದ ಸುಮಾರು 6.50 ಲಕ್ಷ ಜನರ ಮನೆಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯಗೊಂಡಿದೆ
ಅಮೆರಿಕದಲ್ಲಿ ಭೀಕರ ಚಂಡಮಾರುತ: 21 ಜನರು ಬಲಿ, 6.50 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ!!

Chicago dust storm: ಅಮೆರಿಕದ ಎರಡು ರಾಜ್ಯಗಳಲ್ಲಿ ಭೀಕರ ಚಂಡಮಾರುತದಿಂದಾಗಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ತೀವ್ರ ಹವಾಮಾನದ ಪರಿಣಾಮವಾಗಿ 14 ಜನರು ಸಾವನ್ನಪ್ಪಿದ್ದಾರೆ ಎಂದು ಕೆಂಟುಕಿ ಅಧಿಕಾರಿಗಳು ತಿಳಿಸಿದ್ದಾರೆ, ಆದರೆ ಸೇಂಟ್ ಲೂಯಿಸ್ ನಗರದಲ್ಲಿ ಐದು ಜನರು ಸೇರಿದಂತೆ ಮಿಸೌರಿಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಶನಿವಾರ ಬೆಳಗ್ಗೆ ಕೆಂಟುಕಿಯಲ್ಲಿ ಸುಂಟರಗಾಳಿ ಆಗ್ನೇಯ ಲಾರೆಲ್ ಕೌಂಟಿಯನ್ನು ಅಪ್ಪಳಿಸಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದ ಸುಂಟರಗಾಳಿಗಳು ಸುಮಾರು 5,000ಕ್ಕೂ ಹೆಚ್ಚು ಕಟ್ಟಡಗಳನ್ನು ಹಾನಿಗೊಳಿಸಿವೆ, ಛಾವಣಿಗಳನ್ನು ನಾಶಪಡಿಸಿವೆ ಮತ್ತು ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುಳಿವೆ ಎಂದು ಮಿಸೌರಿ ಅಧಿಕಾರಿಗಳು ತಿಳಿಸಿದ್ದಾರೆ.

Add Zee News as a Preferred Source

ಚಂಡಮಾರುತದಿಂದ ಸುಮಾರು 6.50 ಲಕ್ಷ ಜನರ ಮನೆಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯಗೊಂಡಿದೆ. ಅತಿಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಮನೆ ಮನೆಗೆ ಶೋಧ ನಡೆಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಕೆಂಟುಕಿಯ ಅಧಿಕಾರಿಗಳು ಗಂಭೀರವಾಗಿ ಗಾಯಗಳಾಗಿರುವುದಾಗಿ ತಿಳಿಸಿದ್ದಾರೆ. "ಹಾನಿಗೊಳಗಾದ ಪ್ರದೇಶದಲ್ಲಿ ಬದುಕುಳಿದವರಿಗಾಗಿ ಹುಡುಕಾಟ ಮುಂದುವರೆದಿದೆ" ಎಂದು ಲಾರೆಲ್ ಕೌಂಟಿ ಶೆರಿಫ್ ಜಾನ್ ರೂಟ್ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಶೇ.82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ: ಮಾಜಿ ಸಂಸದೆಯ ಶಾಕಿಂಗ್‌ ಹೇಳಿಕೆ

ಹವಾಮಾನ ಇಲಾಖೆಯಿಂದ ಮಾಹಿತಿ

ನಗರದ ಪಶ್ಚಿಮದಲ್ಲಿರುವ ಫಾರೆಸ್ಟ್ ಪಾರ್ಕ್ ಬಳಿ ಸ್ಥಳೀಯ ಸಮಯ ಮಧ್ಯಾಹ್ನ 2.30ರ ನಂತರ ಚಂಡಮಾರುತ ಅಪ್ಪಳಿಸಿದೆ ಎಂದು ರಾಷ್ಟ್ರೀಯ ಹವಾಮಾನ ಸೇವೆಯ ರಾಡಾರ್ ಸೂಚಿಸಿದೆ. ಹತ್ತಿರದ ಸೆಂಟೆನಿಯಲ್ ಕ್ರಿಶ್ಚಿಯನ್ ಚರ್ಚ್‌ನ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಮೂವರು ಜನರು ಸಾವನ್ನಪ್ಪಿದ್ದಾರೆ ಎಂದು ಸೇಂಟ್ ಲೂಯಿಸ್ ಅಗ್ನಿಶಾಮಕ ಇಲಾಖೆ ತಿಳಿಸಿದೆ. ಅವಶೇಷಗಳಡಿ ಸಿಲುಕಿದವರನ್ನ ರಕ್ಷಿಸಲು ಮತ್ತು ಲೂಟಿ ಮಾಡುವ ಸಾಧ್ಯತೆಯನ್ನ ಕಡಿಮೆ ಮಾಡಲು, ಹೆಚ್ಚು ಹಾನಿಗೊಳಗಾದ ಎರಡು ಪ್ರದೇಶಗಳಲ್ಲಿ ಸ್ಥಳೀಯ ಸಮಯ 21:00 ರಿಂದ 06:00ರವರೆಗೆ ಕರ್ಫ್ಯೂ ವಿಧಿಸಲಾಯಿತು. ಈ ಭೀಕರ ಚಂಡಮಾರುತದಿಂದ ʼಜೀವನ ಮತ್ತು ವಿನಾಶದ ನಷ್ಟ ನಿಜವಾಗಿಯೂ ಭಯಾನಕವಾಗಿದೆʼ ಎಂದು ಸೇಂಟ್ ಲೂಯಿಸ್ ಮೇಯರ್ ಕಾರಾ ಸ್ಪೆನ್ಸರ್ ಹೇಳಿದ್ದಾರೆ. 

"ಮುಂದಿನ ದಿನಗಳಲ್ಲಿ ನಮಗೆ ಮಾಡಲು ಬಹಳಷ್ಟು ಕೆಲಸಗಳಿವೆ. ಅದರ ಬಗ್ಗೆ ಯಾವುದೇ ಸಂದೇಹವಿಲ್ಲ, ಆದರೆ ಇಂದು ರಾತ್ರಿ ನಾವು ಜೀವಗಳನ್ನು ಉಳಿಸುವ ಮತ್ತು ಜನರನ್ನು ಸುರಕ್ಷಿತವಾಗಿರಿಸುವತ್ತ ಗಮನಹರಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ. ನೆರೆಯ ಇಲಿನಾಯ್ಸ್‌ನಲ್ಲಿಯೂ ಸುಂಟರಗಾಳಿಗಳು ಅಪ್ಪಳಿಸಿವೆ ಮತ್ತು ಅಟ್ಲಾಂಟಿಕ್ ಕರಾವಳಿಯ ಪೂರ್ವಕ್ಕೆ ಹವಾಮಾನ ಪರಿಸ್ಥಿತಿಗಳು ಹೆಚ್ಚು ತೀವ್ರವಾಗಿವೆ ಎಂದು ಅಮೆರಿಕದ ರಾಷ್ಟ್ರೀಯ ಹವಾಮಾನ ಸೇವೆ ತಿಳಿಸಿದೆ.

ಇದನ್ನೂ ಓದಿ: ಮತ್ತೆ ಹರಡುತ್ತಿದೆ ಕೊರೊನಾ..! ಈ ಬಾರಿ ಭಯಾನಕವಾಗಿರುತ್ತಾ ಕೋವಿಡ್‌..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News