ಕೊಲಂಬೊ (ಶ್ರೀಲಂಕಾ): ಆರ್ಥಿಕ ಸಂಕಷ್ಟದಿಂದ ಶ್ರೀಲಂಕಾ ಈಗಾಗಲೇ ತತ್ತರಸಿ ಹೋಗಿದೆ. ಶ್ರೀಲಂಕಾದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಮಾಹಿತಿಯ ಪ್ರಕಾರ, ಇದೀಗ ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಗೊಟಬಯ ರಾಜಪಕ್ಸ ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಮೃತಾ ಫಡ್ನವಿಸ್ ಗೆ ಬ್ರಿಟಿಷ್ ಸಂಸತ್ತಿನಲ್ಲಿ ಇಂಡಿಯನ್ ಆಫ್ ದಿ ವರ್ಲ್ಡ್ ಪ್ರಶಸ್ತಿ


ಕೊಲಂಬೊದಲ್ಲಿರುವ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿರುವ ಬೆನ್ನಲ್ಲೇ ಅವರು ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ನಿವಾಸದ ಸುತ್ತಲೂ ಸುತ್ತುವರೆದಿರುವ ಪ್ರತಿಭಟನಾಕಾರರು ಅವರ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. 


ಅಧ್ಯಕ್ಷ ಗೊಟಬಯ ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಪ್ರತಿಭಟನಾಕಾರರ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಲಾಗಿತ್ತು. ಆದರೆ ಕರ್ಫ್ಯೂ ಹಿಂತೆಗೆದುಕೊಂಡ ನಂತರ ಈ ಘಟನೆ ಜರುಗಿದೆ. 


ಇದನ್ನೂ ಓದಿ:ಶಿಂಜೊ ಅಬೆ ನಿಧನ: ಕೊನೆಯ ಭೇಟಿ ನೆನೆದು ಮೋದಿ ಭಾವುಕ ಪೋಸ್ಟ್‌


ಪ್ರತಿಭಟನಾಕಾರರು, ಅಧ್ಯಕ್ಷರ ನಿವಾಸದ ಎದುರು ಹಾಕಲಾಗಿದ್ದ ಬ್ಯಾರಿಕೇಡ್ ಮುರಿದು ಒಳ ನುಗ್ಗಿದ್ದಾರೆ. ರಾಜಪಕ್ಸ ಅವರ ನಿವಾಸ ಸಂಪೂರ್ಣವಾಗಿ ಹಿಡಿತಕ್ಕೆ ಪಡೆದುಕೊಂಡಿದ್ದಾರೆ. ಆದರೆ, ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ ಎನ್ನಲಾಗಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.