ಕದನ ವಿರಾಮಕ್ಕಾಗಿ ಅಮೆರಿಕ ಪಾಕಿಸ್ತಾನವನ್ನು ಬ್ಲಾಕ್‌ಮೇಲ್ ಮಾಡಿತೇ?

India Pakistan Ceasefire: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆ ಆಗಲು ಈ ಒಂದು ವಿಚಾರ ಕಾರಣವಾಯಿತೇ ಎಂಬ ಪ್ರಶ್ನೆ ಮೂಡಿದೆ. ಅಮೆರಿಕದ ಮಾತಿಗೆ ಪಾಕಿಸ್ತಾನ ಬಗ್ಗಿದ್ದೇಕೆ? ಎಂಬ ಬಗ್ಗೆ ಒಂದಿಷ್ಟು ವಿಚಾರಗಳು ಚರ್ಚೆಯಾಗುತ್ತಿವೆ. 

Written by - Chetana Devarmani | Last Updated : May 11, 2025, 07:36 AM IST
  • ಭಾರತ ಪಾಕಿಸ್ತಾನ ಕದನ ವಿರಾಮ
  • ಭಾರತ ಪಾಕಿಸ್ತಾನ ಕದನ ವಿರಾಮಕ್ಕೆ ಕಾರಣ
  • ಅಮೆರಿಕದ ಮಾತಿಗೆ ಪಾಕಿಸ್ತಾನ ಬಗ್ಗಿದ್ದೇಕೆ?
ಕದನ ವಿರಾಮಕ್ಕಾಗಿ ಅಮೆರಿಕ ಪಾಕಿಸ್ತಾನವನ್ನು ಬ್ಲಾಕ್‌ಮೇಲ್ ಮಾಡಿತೇ?
ಕದನ ವಿರಾಮ

India Pakistan Ceasefire: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಉದ್ವಿಗ್ನತೆ ಈಗ ಕಡಿಮೆಯಾಗಿದೆ. ಎರಡೂ ದೇಶಗಳು ತಮ್ಮ ಮಿಲಿಟರಿ ದಾಳಿಯನ್ನು ಪರಸ್ಪರ ನಿಲ್ಲಿಸುವುದಾಗಿ ಘೋಷಿಸಿವೆ.

Add Zee News as a Preferred Source

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ (ಮೇ 10) ಮೊದಲು ಕದನ ವಿರಾಮವನ್ನು ಘೋಷಿಸಿದರು. ಆ ಬಳಿಕ ಪಾಕಿಸ್ತಾನ ಮತ್ತು ಭಾರತ ಕದನ ವಿರಾಮವನ್ನು ದೃಢಪಡಿಸಿದವು. ಅಮೆರಿಕದ ಮಧ್ಯಸ್ಥಿಕೆಯ ನಂತರ ಪಾಕಿಸ್ತಾನ ಮತ್ತು ಭಾರತ ದೇಶಗಳ ನಡುವೆ ಕದನ ವಿರಾಮ ಒಪ್ಪಂದಕ್ಕೆ ಬಂದಂತೆ ಕಾಣುತ್ತದೆ.

ಪಾಕಿಸ್ತಾನ ಅಥವಾ ಭಾರತದ ಎರಡೂ ದೇಶಗಳು ಸಹ ಅಮೆರಿಕವು ಮಾತುಕತೆ ಮೂಲಕ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿತು ಎಂದು ದೃಢಪಡಿಸಿಲ್ಲ. ಟ್ರಂಪ್ ಯಾವಾಗಲೂ ಪ್ರಚಾರ ಪ್ರಿಯರಾಗಿದ್ದರೂ ಅವರು ಯುದ್ಧ ವಿರೋಧಿಯೂ ಆಗಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಪಹಲ್ಗಾಮ್‌ನಲ್ಲಿ ನಡೆದ ದಾಳಿಗೆ ಭಾರತವು ಆಪರೇಷನ್‌ ಸಿಂದೂರ ಕಾರ್ಯಾಚರಣೆ  ಮೂಲಕ 9 ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತ ನಡೆಸಿದ ದಾಳಿಯ ನಂತರ ಪಾಕಿಸ್ತಾನವು ಡ್ರೋನ್‌ ಮತ್ತು ಕ್ಷಿಪಣಿಗಳಿಂದ ಭಾರತದ ವಿವಿಧ ನಗರಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದೆ. ಪಾಕಿಸ್ತಾನವು ಗಡಿ ನಿಯಂತ್ರಣ ಪ್ರದೇಶಗಳ ಮೇಲೆ ನಿರಂತರ ದಾಳಿಗಳನ್ನು ನಡೆಸಿತು.

ಭಾರತವು ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿದ್ದು ಮಾತ್ರವಲ್ಲದೆ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳು ಮತ್ತು ರಾಡಾರ್‌ಗಳ ಮೇಲೆ ಕೂಡ ದಾಳಿ ನಡೆಸಿತು. ಈ ಭಾರತೀಯ ದಾಳಿಗಳು ಪಾಕಿಸ್ತಾನದಲ್ಲಿ ತೀವ್ರ ಹಾನಿಯನ್ನುಂಟು ಮಾಡಿವೆ ಎಂದು ಭಾರತೀಯ ಸಶಸ್ತ್ರ ಪಡೆಗಳು ತಿಳಿಸಿವೆ. ಇದೆಲ್ಲದರ ಬಳಿಕ ನಿನ್ನೆ ಮೇ 10 ರಂದು ಎರಡೂ ದೇಶಗಳು ಕದನ ವಿರಾಮ ಘೋಷಣೆ ಮಾಡಿವೆ.

ಇದನ್ನೂ ಓದಿ: ಅಮೆರಿಕದ ಮಾತಿಗೂ ಬಗ್ಗದೆ, ಪಾಕ್‌ ಪರದಾಡುವಂತೆ ಮಾಡಿದ್ದರು "ಉಕ್ಕಿನ ಮಹಿಳೆ ಇಂದಿರಾ ಗಾಂಧಿ"..!

ಇದರ ಬೆನ್ನಲ್ಲೇ, ಪಾಕಿಸ್ತಾನದ ಸೇನಾ ಮಹಾನಿರ್ದೇಶಕರು ನಿನ್ನೆ ಮಧ್ಯಾಹ್ನ 3:35 ಕ್ಕೆ ಭಾರತೀಯ ಸೇನೆಯ ಮಹಾನಿರ್ದೇಶಕರನ್ನು ಸಂಪರ್ಕಿಸಿ ಮಾತುಕತೆ ನಡೆಸಿದರು. ನಂತರ ಎರಡೂ ಕಡೆಯ ನಡುವೆ ಒಪ್ಪಂದಕ್ಕೆ ಬರಲಾಯಿತು ಎಂದು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದರಲ್ಲಿ ಅಮೆರಿಕದ ಪಾತ್ರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಅದೇ ಸಮಯದಲ್ಲಿ, ನಾವು ಅಂತರರಾಷ್ಟ್ರೀಯ ರಾಜಕೀಯ ಪ್ರವೃತ್ತಿಗಳನ್ನು ನೋಡಿದರೆ ಕೆಲವು ಗುಪ್ತ ವಿಷಯಗಳು ಸ್ಪಷ್ಟವಾಗುತ್ತವೆ. ಅಂದರೆ ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ 1 ಬಿಲಿಯನ್ ಅಮೆರಿಕನ್ ಡಾಲರ್ ಸಾಲವನ್ನು ಪಡೆಯಲು ಅನುಮೋದನೆಯನ್ನು ಪಡೆದುಕೊಂಡಿದೆ.

ಹಾಗೆ ನೋಡಿದರೆ, ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಒಪ್ಪಿಕೊಂಡರೆ ಮಾತ್ರ ಐಎಂಎಫ್ ಸಾಲವನ್ನು ಒದಗಿಸುವಂತೆ ಅಮೆರಿಕ ಪಾಕಿಸ್ತಾನದ ಮೇಲೆ ಒತ್ತಡ ಹೇರಿರಬಹುದು ಎಂಬ ಊಹಾಪೋಹ ಹರಿದಾಡುತ್ತಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯ ನಿರ್ಧಾರಗಳ ಮೇಲೆ ಅಮೆರಿಕ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ವರದಿಗಳು ಸೂಚಿಸುತ್ತಿರುವುದರಿಂದ ಇದರ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: ಇದು ಹೊಸ ಆರಂಭ..!! ಕದನ ವಿರಾಮದ ನಂತರ ಪಾಕ್‌ ಪ್ರಧಾನಿ ಶಹಬಾಜ್ ಷರೀಫ್ ಸಂಚಲನ ಹೇಳಿಕೆ

ನಿನ್ನೆ ಬೆಳಗಿನ ಜಾವದವರೆಗೂ ಭಾರತದ ಮೇಲೆ ಅತಿ ವೇಗದ ಕ್ಷಿಪಣಿಗಳಿಂದ ದಾಳಿ ಮಾಡಲು ಪ್ರಯತ್ನಿಸುತ್ತಿದ್ದ ಪಾಕಿಸ್ತಾನ ಮಧ್ಯಾಹ್ನ ಇದ್ದಕ್ಕಿದ್ದಂತೆ ಶಾಂತಿ ಮಾತುಕತೆಗೆ ಬರಲು ಇದೇ ಕಾರಣವಾಗಿರಬಹುದು ಎಂದೂ ಹೇಳಲಾಗುತ್ತಿದೆ. ಆದರೆ, ಯಾವುದೇ ಅಧಿಕೃತ ಮಾಹಿತಿ ಈ ಬಗ್ಗೆ ಹೊರಬಂದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News