ಆಪರೇಷನ್ ಸಿಂಧೂರ್: ಭಾರತ ಈ 9 ಪ್ರದೇಶಗಳ ಮೇಲೆ ದಾಳಿ ಮಾಡಿದ್ದು ಏಕೆ? ಇದರ ಹಿಂದಿನ ಕಥೆ ಏನು?

Operation Sindoor Strikes: 'ಆಪರೇಷನ್ ಸಿಂಧೂರ್' ಎಂಬ ಸಂಕೇತನಾಮ ಹೊಂದಿರುವ ಈ ದಾಳಿಯು ಬಹಾವಲ್ಪುರದಲ್ಲಿ ಜೈಶ್-ಎ-ಮೊಹಮ್ಮದ್ ನಾಯಕರನ್ನು ಮತ್ತು ಮುರಿಡ್ಕೆಯಲ್ಲಿ ಲಷ್ಕರ್-ಎ-ತೈಬಾ ನಾಯಕರನ್ನು ಕೊಲ್ಲುವ ಗುರಿಯನ್ನು ಹೊಂದಿತ್ತು.

Written by - Savita M B | Last Updated : May 7, 2025, 07:46 AM IST
  • ಬುಧವಾರ ಬೆಳಗಿನ ಜಾವ ಭಾರತೀಯ ಸಶಸ್ತ್ರ ಪಡೆಗಳು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ
  • ಜೈಶ್-ಎ-ಮೊಹಮ್ಮದ್‌ನ ನೆಲೆ ಎಂದು ಕರೆಯಲ್ಪಡುವ ಬಹವಾಲ್ಪುರ್ ಇವುಗಳಲ್ಲಿ ಒಂದಾಗಿದೆ
ಆಪರೇಷನ್ ಸಿಂಧೂರ್: ಭಾರತ ಈ 9 ಪ್ರದೇಶಗಳ ಮೇಲೆ ದಾಳಿ ಮಾಡಿದ್ದು ಏಕೆ? ಇದರ ಹಿಂದಿನ ಕಥೆ ಏನು?

9 terror camps targeted in pakistan: ಬುಧವಾರ ಬೆಳಗಿನ ಜಾವ ಭಾರತೀಯ ಸಶಸ್ತ್ರ ಪಡೆಗಳು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ. ಜೈಶ್-ಎ-ಮೊಹಮ್ಮದ್‌ನ ನೆಲೆ ಎಂದು ಕರೆಯಲ್ಪಡುವ ಬಹವಾಲ್ಪುರ್ ಇವುಗಳಲ್ಲಿ ಒಂದಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಈ ನಿರ್ಣಾಯಕ ಮಿಲಿಟರಿ ಕ್ರಮ ಕೈಗೊಳ್ಳಲಾಗಿದೆ.

Add Zee News as a Preferred Source

ಈ ದಾಳಿಗಳು 'ಆಪರೇಷನ್ ಸಿಂಧೂರ್' ನ ಭಾಗವಾಗಿದೆ ಎಂದು ರಕ್ಷಣಾ ಸಚಿವಾಲಯ ದೃಢಪಡಿಸಿದೆ. ಈ ಕಾರ್ಯಾಚರಣೆಯು ಭಾರತದ ಮೇಲೆ ದಾಳಿಗಳನ್ನು ಯೋಜಿಸುವಲ್ಲಿ ಭಾಗಿಯಾಗಿರುವ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿತು. ಭಾರತ ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ಯಾವುದೇ ದಾಳಿ ನಡೆಸಿಲ್ಲ. ಗುರಿಗಳ ಆಯ್ಕೆ ಮತ್ತು ದಾಳಿ ನಡೆಸುವಲ್ಲಿ ಸಂಯಮವನ್ನು ಕಾಯ್ದುಕೊಂಡಿರುವುದಾಗಿ ಭಾರತದ ಅಧಿಕೃತ ಹೇಳಿಕೆಯಲ್ಲಿ ರಕ್ಷಣಾ ಸಚಿವಾಲಯ ತಿಳಿಸಿದೆ. ಒಟ್ಟು ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಲಾಯಿತು. 

ಇದನ್ನೂ ಓದಿ-ಆಪರೇಷನ್ ಸಿಂಧೂರ್ ಎಂದರೇನು? ಇದಕ್ಕೆ ಆ ಹೆಸರಿಡಲು ಕಾರಣವೇನು?

ಈ ಕಾರ್ಯಾಚರಣೆಯನ್ನು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ನಡೆಸಿತು. ಕಾರ್ಯಾಚರಣೆ ಭೂಮಿ ಮತ್ತು ಸಮುದ್ರ ಎರಡರಲ್ಲೂ ನಡೆಯಿತು. ಎಲ್ಲಾ ಪಡೆಗಳು ಸಕ್ರಿಯವಾಗಿ ಭಾಗವಹಿಸಿದ್ದವು ಮತ್ತು ಮುಖ್ಯವಾಗಿ, ದಾಳಿಯ ಸಮಯದಲ್ಲಿ ಯಾವುದೇ ಭಾರತೀಯ ಜೆಟ್ ಕಳೆದುಹೋಗಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿವೆ. 'ಆಪರೇಷನ್ ಸಿಂಧೂರ್' ಎಂಬ ಸಂಕೇತನಾಮ ಹೊಂದಿರುವ ಈ ದಾಳಿಯು ಬಹಾವಲ್ಪುರದಲ್ಲಿ ಜೈಶ್-ಎ-ಮೊಹಮ್ಮದ್ ನಾಯಕರನ್ನು ಮತ್ತು ಮುರಿಡ್ಕೆಯಲ್ಲಿ ಲಷ್ಕರ್-ಎ-ತೈಬಾ ನಾಯಕರನ್ನು ಕೊಲ್ಲುವ ಗುರಿಯನ್ನು ಹೊಂದಿತ್ತು.

ಒಂಬತ್ತು ಸ್ಥಳಗಳನ್ನು ಗುರುತಿಸಿ ಗುರಿಯಿಡಲಾಯಿತು. ಭಯೋತ್ಪಾದಕ ಶಿಬಿರಗಳ ಮೇಲಿನ ಎಲ್ಲಾ ದಾಳಿಗಳು ಯಶಸ್ವಿಯಾಗಿವೆ. ಆ ಒಂಬತ್ತು ಸ್ಥಳಗಳು:

ಬಹವಾಲ್ಪುರ್
ಮುರಿಡ್ಕೆ
ಗುಲ್ಪುರ್
ಭಿಂಬರ್
ಚಕ್ ಅಮರು
ಬ್ಯಾಗ್
ಕೋಟ್ಲಿ
ಸಿಯಾಲ್‌ಕೋಟ್
ಮುಜಫರಾಬಾದ್

ಇದನ್ನೂ ಓದಿ-ಆಪರೇಷನ್ ಸಿಂಧೂರ್ ಎಂದರೇನು? ಇದಕ್ಕೆ ಆ ಹೆಸರಿಡಲು ಕಾರಣವೇನು?

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಭಾರತೀಯ ಸೇನೆ ನಾಶಪಡಿಸಿದೆ ಮತ್ತು ಅಲ್ಲಿಂದ ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಲಾಗಿತ್ತು ಎಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿದೆ.

"ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡುವ ನಮ್ಮ ಬದ್ಧತೆಗೆ ನಾವು ಬದ್ಧರಾಗಿದ್ದೇವೆ.. ಈ ದಾಳಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಭಾಗಿಯಾಗಿದ್ದಾರೆಂದು ಸ್ಪಷ್ಟವಾಗಿ ಸೂಚಿಸುವ ವಿಶ್ವಾಸಾರ್ಹ ಮಾಹಿತಿ ಮತ್ತು ತಾಂತ್ರಿಕ ಮಾಹಿತಿ ಸೇರಿದಂತೆ ಪುರಾವೆಗಳಿವೆ.. ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವ ಮೂಲಸೌಕರ್ಯಗಳ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಬದಲಾಗಿ, ಕಳೆದ ಕೆಲವು ದಿನಗಳಿಂದ ಪಾಕಿಸ್ತಾನ ಅದನ್ನು ನಿರಾಕರಿಸಿದೆ ಮತ್ತು ಭಾರತದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದೆ" ರಕ್ಷಣಾ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. 

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

...Read More

Trending News