"ಭಾರತೀಯರೇ 48 ಗಂಟೆಗಳಲ್ಲಿ ಸಿದ್ಧರಾಗಿರಿ".. 5 ಪ್ರಮುಖ ನಿರ್ಧಾರ ಘೋಷಿಸಿದ ಪಾಕಿಸ್ತಾನ..!

ಪಾಕಿಸ್ತಾನ ಸರ್ಕಾರ ದೇಶದಲ್ಲಿರುವ ಭಾರತೀಯರು ಮುಂದಿನ 48 ಗಂಟೆಗಳಲ್ಲಿ ದೇಶ ಬಿಡುವಂತೆ ಆದೇಶಿಸಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಪಾಕ್‌ ಈ ನಿರ್ಧಾರ ಘೋಷಿಸಿದೆ.

Written by - Krishna N K | Last Updated : Apr 24, 2025, 07:40 PM IST
    • ಪಾಕಿಸ್ತಾನ ಸರ್ಕಾರ ದೇಶದಲ್ಲಿರುವ ಭಾರತೀಯರು ಮುಂದಿನ 48 ಗಂಟೆಗಳಲ್ಲಿ ದೇಶ ಬಿಡುವಂತೆ ಆದೇಶಿಸಿದೆ.
    • ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಪಾಕ್‌ ಈ ನಿರ್ಧಾರ.
    • ಪಾಕಿಸ್ತಾನದ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳು ಹಾರಾಟ ನಡೆಸುವುದನ್ನು ನಿಷೇಧಿಸಲಾಗಿದೆ.
"ಭಾರತೀಯರೇ 48 ಗಂಟೆಗಳಲ್ಲಿ ಸಿದ್ಧರಾಗಿರಿ".. 5 ಪ್ರಮುಖ ನಿರ್ಧಾರ ಘೋಷಿಸಿದ ಪಾಕಿಸ್ತಾನ..!

ಪಾಕಿಸ್ತಾನ : ಪಾಕಿಸ್ತಾನದ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳು ಹಾರಾಟ ನಡೆಸುವುದನ್ನು ನಿಷೇಧಿಸಲಾಗಿದ್ದು, ಮುಂದಿನ 48 ಗಂಟೆಗಳಲ್ಲಿ ದೇಶದಲ್ಲಿರುವ ಎಲ್ಲಾ ಭಾರತೀಯರು ದೇಶ ಬಿಟ್ಟು ತೆರಳುವಂತೆ ಪಾಕ್‌ ಆದೇಶಿಸಿದೆ. ಇದಲ್ಲದೆ, ಭಾರತದೊಂದಿಗಿನ ಎಲ್ಲಾ ವ್ಯಾಪಾರವನ್ನು ನಿಷೇಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಸರ್ಕಾರ ಪ್ರತಿಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಘೋಷಣೆ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 27 ಪ್ರವಾಸಿಗರ ಸಾವು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಪ್ರದೇಶದಲ್ಲಿ ಏಪ್ರಿಲ್ 22, 2025 ರಂದು ಭಯೋತ್ಪಾದಕರು ಅನಿರೀಕ್ಷಿತ ದಾಳಿ ನಡೆಸಿದರು. ಈ ಕ್ರೂರ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರವಾಸಿಗರು ಸೇರಿದಂತೆ 27 ಜನ ಸಾವನ್ನಪ್ಪಿದರು. ಈ ದಾಳಿಯ ಹೊಣೆಯನ್ನು ಪಾಕಿಸ್ತಾನಿ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ಹೊಣೆಯನ್ನು ಹೊತ್ತುಕೊಂಡಿದೆ. ಇದರಿಂದಾಗಿ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ, ಅತ್ತ ಪಾಕ್‌ ಸಹ ಭಾರತದ ವಿರುದ್ಧ ಪ್ರತೀಕಾರದ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ.

ಇದನ್ನೂ ಓದಿ:ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತ ಎಷ್ಟು ಶಕ್ತಿಶಾಲಿ ಗೊತ್ತೆ..? ಎರಡೂ ದೇಶಗಳ ಸೇನಾ ಬಲಾಬಲದ ಡಿಟೈಲ್ಸ್‌ ಇಲ್ಲಿದೆ ನೋಡಿ.. 

ಭಾರತದ ವಿರುದ್ಧ ಪಾಕ್‌ ಪ್ರತೀಕಾರದ ಕ್ರಮ : ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರಿಸುತ್ತಿದ್ದಂತೆ, ಪಾಕ್‌ ಸರ್ಕಾರವು ಪ್ರತಿಕ್ರಿಯೆಯಾಗಿ ಭಾರತದ ಮೇಲೆ ಪರಿಣಾಮ ಬೀರಬಹುದಾದ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.. ಅವುಗಳು ಈ ಕೆಳಗಿನಂತಿವೆ.

ಪಾಕಿಸ್ತಾನ ಸರ್ಕಾರ ಭಾರತದೊಂದಿಗಿನ ಎಲ್ಲಾ ವ್ಯಾಪಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
ಪಾಕಿಸ್ತಾನ ಸರ್ಕಾರ ಭಾರತೀಯ ವಿಮಾನಗಳು ತನ್ನ ವಾಯುಪ್ರದೇಶವನ್ನು ಬಳಸುವುದನ್ನು ನಿಷೇಧಿಸಿದೆ.
ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಧಿಕಾರಿಗಳ ಸಂಖ್ಯೆಯನ್ನು 30ಕ್ಕೆ ಇಳಿಸಲು ನಿರ್ಧರಿಸಿದೆ.
ಪಾಕಿಸ್ತಾನ ಸರ್ಕಾರವು ಸಾರ್ಕ್ ದೇಶಗಳಿಂದ ಭಾರತಕ್ಕೆ ವೀಸಾ ನೀಡುವುದನ್ನು ನಿಲ್ಲಿಸಲು ನಿರ್ಧರಿಸಿದೆ.
ಮುಂದಿನ 48 ಗಂಟೆಗಳಲ್ಲಿ ಪಾಕಿಸ್ತಾನದಲ್ಲಿರುವ ಭಾರತೀಯರು ದೇಶ ತೊರೆಯಬೇಕು ಎಂದು ಘೋಷಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News