'ಕಾಶ್ಮೀರ ಸಮಸ್ಯೆ' ಕುರಿತು ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಮ್ರಾನ್ ಖಾನ್ ಅವರ ವಿಶೇಷ ಸಹಾಯಕ ಡಾ. ಫಿರ್ದೌಸ್ ಆಶಿಕ್ ಅವನ್ ಅವರು ಪಾಕಿಸ್ತಾನದ ಪ್ರಧಾನಿ ಸೋಮವಾರ ಸಂಜೆ 5: 30 ಕ್ಕೆ ಮಾತನಾಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.  

Last Updated : Aug 26, 2019, 03:41 PM IST
'ಕಾಶ್ಮೀರ ಸಮಸ್ಯೆ' ಕುರಿತು ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ title=

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸೋಮವಾರ ಸಂಜೆ 5: 30 ಕ್ಕೆ "ಕಾಶ್ಮೀರ ಸಮಸ್ಯೆ" ಕುರಿತು ತಮ್ಮ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಾಕಿಸ್ತಾನದ ಪ್ರಧಾನಿ ಸೋಮವಾರ ಸಂಜೆ 5: 30 ಕ್ಕೆ ಮಾತನಾಡಲಿದ್ದಾರೆ ಎಂದು ಖಾನ್ ಅವರ ವಿಶೇಷ ಸಹಾಯಕ ಡಾ. ಫಿರ್ದೌಸ್ ಆಶಿಕ್ ಅವನ್ ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಭಾರತ ಸರ್ಕಾರದ ನಿರ್ಧಾರದ ಬಗ್ಗೆ ಪಾಕಿಸ್ತಾನ ಆತಂಕದಲ್ಲಿದ್ದು ಈ ಸಮಯದಲ್ಲಿ ಖಾನ್ ಅವರ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೇಂದ್ರದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಇತ್ತೀಚೆಗೆ 370 ನೇ ವಿಧಿಯನ್ನು ಹಿಂತೆಗೆದುಕೊಂಡಿತು ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಮೋದಿ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಈ ಪ್ರದೇಶವು ಈಗ ಕೇಂದ್ರದ ಆಡಳಿತದಲ್ಲಿ ಉಳಿಯುತ್ತದೆ.

ಮೋದಿ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನ ತೀವ್ರವಾಗಿ ವಿರೋಧಿಸಿದೆ ಮತ್ತು ಈ ವಿಷಯವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲು ಪ್ರಯತ್ನವನ್ನು ಮಾಡುತ್ತಿದೆ. ಆದರೆ ಇಸ್ಲಾಮಾಬಾದ್ ಈ ವಿಷಯದ ಬಗ್ಗೆ ಅಂತರರಾಷ್ಟ್ರೀಯ ಸಮುದಾಯದಿಂದ ಯಾವುದೇ ರೀತಿಯ ಬೆಂಬಲವನ್ನು ಪಡೆಯಲು ವಿಫಲವಾಗಿದೆ. ಭಾರತಕ್ಕೆ ದೊರೆತ ಪ್ರಮುಖ ರಾಜತಾಂತ್ರಿಕ ವಿಜಯದಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಮೋದಿ ಸರ್ಕಾರದ ನಿರ್ಧಾರವನ್ನು ವಿಶ್ವದಾದ್ಯಂತದ ಹೆಚ್ಚಿನ ದೇಶಗಳು ಬೆಂಬಲಿಸಿವೆ ಮತ್ತು ಇದು ದ್ವಿಪಕ್ಷೀಯ ವಿಷಯ ಎಂದು ಒತ್ತಿ ಹೇಳುವ ಮೂಲಕ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿವೆ.

ಪಾಕಿಸ್ತಾನದ ವಿರೋಧ ಪಕ್ಷಗಳಿಂದ ಖಾನ್ ತೀವ್ರ ರಾಜಕೀಯ ಒತ್ತಡವನ್ನು ಎದುರಿಸುತ್ತಿದ್ದಾರೆ ಮತ್ತು ಅನೇಕರು ಕಾಶ್ಮೀರವನ್ನು ಪಾಕಿಸ್ತಾನ 'ಮಾರಾಟ' ಮಾಡಿದೆ ಎಂದು ಆರೋಪಿಸಿದ್ದಾರೆ. 

ಏತನ್ಮಧ್ಯೆ, ಕಾಶ್ಮೀರದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಯನ್ನು ಸಾಧಿಸಲು ಕೇಂದ್ರವು ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪದೇ ಪದೇ ಸಮರ್ಥಿಸಿಕೊಂಡಿದ್ದಾರೆ. ಪ್ರದೇಶದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಲು ಕೇಂದ್ರ ನಿರ್ಧರಿಸಿದೆ.
 

Trending News