ನಟಿಯ ಬೆತ್ತಲೆ ಪ್ರತಿಭಟನೆ ರಹಸ್ಯ ಬಯಲು..! ಹಣ ಪಡೆದು ಈ ರೀತಿ ಮಾಡಿದ್ಲಾ ನಟಿ ಶ್ರೀರೆಡ್ಡಿ..?

ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು. ಇದೀಗ ಈ ಕುರಿತು ಶಾಕಿಂಗ್‌ ವಿಚಾರವೊಂದು ಬಯಲಿಗೆ ಬಂದಿದೆ.

Written by - Krishna N K | Last Updated : May 2, 2024, 07:49 PM IST
    • ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.
    • ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿದ್ದರು.
    • ನಟಿಯ ಬೆತ್ತಲೆ ಪ್ರತಿಭಟನೆ ಹಿಂದೆ ಪ್ರತಿಷ್ಠಿತ ಸುದ್ದಿವಾಹಿನಿ ನಿರೂಪಕನ ಕೈವಾಡವಿದೆ.
ನಟಿಯ ಬೆತ್ತಲೆ ಪ್ರತಿಭಟನೆ ರಹಸ್ಯ ಬಯಲು..! ಹಣ ಪಡೆದು ಈ ರೀತಿ ಮಾಡಿದ್ಲಾ ನಟಿ ಶ್ರೀರೆಡ್ಡಿ..? title=

Sri Reddy topless protest : ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಈ ಪ್ರಕರಣದ ಕುರಿತು ಶಾಕಿಂಗ್‌ ಅಪ್‌ಡೇಟ್ ಹೊರಬಿದ್ದಿದೆ. ನಟಿಯ ಬೆತ್ತಲೆ ಪ್ರತಿಭಟನೆ ಹಿಂದೆ ಪ್ರತಿಷ್ಠಿತ ಸುದ್ದಿವಾಹಿನಿ ನಿರೂಪಕನ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ..

ಹೌದು.. ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು. ಇದರಿಂದಾಗಿ ನಟಿಯನ್ನು ಸಿನಿರಂಗದಿಂದ ವಜಾಗೊಳಿಸಲಾಯಿತು. ಇದರ ಬೆನ್ನಲ್ಲೆ, ಶ್ರೀರೆಡ್ಡಿ ಚಿತ್ರರಂಗದ ಸೆಲೆಬ್ರಿಟಿಗಳ ಜೊತೆಗಿನ ಖಾಸಗಿ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದರು.

ಇದನ್ನೂ ಓದಿ:ಹರಿ ಹರ ವೀರಮಲ್ಲು ಟೀಸರ್‌ ಔಟ್‌..! ಅಬ್ಬರಿಸಿ ಬೊಬ್ಬಿರಿದ ಪವರ್‌ ಸ್ಟಾರ್‌ ‌ಪವನ್‌ ಕಲ್ಯಾಣ್‌

ಶ್ರೀರೆಡ್ಡಿಗೆ ಚಲನಚಿತ್ರ ಕಲಾವಿದರ ಸಂಘ ನಿಷೇಧ ಹೇರಿತ್ತು. ಏಪ್ರಿಲ್ 2018 ರಲ್ಲಿ ಶ್ರೀ ರೆಡ್ಡಿ ಫಿಲಂ ಚೇಂಬರ್ ಮುಂದೆ ಬೆತ್ತಲೆಯಾಗಿ ಪ್ರದರ್ಶನ ನೀಡಿದ್ದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು. ಶ್ರೀರೆಡ್ಡಿ ಲೈಂಗಿಕ ಕಿರುಕುಳ ಮತ್ತು ತೆಲುಗು ಹುಡುಗಿಯರಿಗೆ ಅವಕಾಶ ನೀಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದರು.

ಅಲ್ಲದೆ, ಶ್ರೀರೆಡ್ಡಿ ಅರೆ ಬೆತ್ತಲೆ ಪ್ರತಿಭಟನೆ ಹಿಂದೆ ಖ್ಯಾತ ಪತ್ರಕರ್ತ ಮೂರ್ತಿ ಕೈವಾಡವಿದೆ ಎಂಬ ವಾದ ಬಲವಾಗಿ ಕೇಳಿಬಂದಿತ್ತು. ಈ ಕುರಿತು ಪ್ರತಿನಿಧಿ 2 ಚಿತ್ರದ ಪ್ರಚಾರದ ಕಾರ್ಯಕ್ರಮದಲ್ಲಿ, ಸ್ಪಷ್ಟನೆ ನೀಡಿದ ಮೂರ್ತಿ, ಶ್ರೀರೆಡ್ಡಿಗೆ ಹಣ ಕೊಟ್ಟು ಪ್ರತಿಭಟನೆ ಮಾಡಿಸಿಲ್ಲ, ಈ ಘಟನೆ ನಡೆದಾಗ ನಾನು ಅಮ್ಮನಿಗೆ ಹುಷಾರಿಲ್ಲ ಅಂತ ಊರಿಗೆ ಹೋಗಿದ್ದೆ. ಎರಡು ದಿನ ಆಸ್ಪತ್ರೆಯಲ್ಲಿದ್ದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ:7 ದೇಶಗಳಲ್ಲಿ ಶೂಟಿಂಗ್, 38 ಭಾಷೆಗಳಲ್ಲಿ ರಿಲೀಸ್.. ಬಾಹುಬಲಿಗಿಂತಲೂ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾ.. ನಾಯಕ ಯಾರು?

ಅಲ್ಲದೆ, ಅವಕಾಶಗಳನ್ನು ನೀಡುವುದಾಗಿ ಹೇಳಿ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವುದು ತಪ್ಪು. ಈ ವಿಚಾರದಲ್ಲಿ ನಾನು ಶ್ರೀರೆಡ್ಡಿಯನ್ನು ಬೆಂಬಲಿಸಿದ್ದೇನೆ ಎಂದು ಮೂರ್ತಿಯವರು ಸ್ಪಷ್ಟ ಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News