ಆನೆ ಹಾವಳಿ ತಡೆಗೆ ಅಗತ್ಯ ಕ್ರಮ :ಈಶ್ವರ ಖಂಡ್ರೆ; ವನ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯದಂತೆ ಪ್ರವಾಸಿಗರಿಗೆ ಮನವಿ

ರಾಜ್ಯದ ಯಾವ ಭಾಗದಲ್ಲಿ ಹೆಚ್ಚಿನ ಸಮಸ್ಯೆ ಇದೆಯೋ ಅಲ್ಲಿ ತ್ವರಿತವಾಗಿ ತಡೆಗೋಡೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದರು.

Written by - Ranjitha R K | Last Updated : May 15, 2024, 04:07 PM IST
  • ವನ್ಯಜೀವಿಗಳ ಹಾವಳಿಯಿಂದ ಮೈಸೂರು ಮತ್ತು ಕೊಡಗು ಭಾಗದಲ್ಲಿ ಬೆಳೆ ನಾಶ
  • ನಿಯಂತ್ರಣಕ್ಕೆ ಈಗಾಗಲೇ ಅಗತ್ಯ ಕ್ರಮ ವಹಿಸಲಾಗಿದೆ
  • ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣ ಹಂಚಿಕೆ
ಆನೆ ಹಾವಳಿ ತಡೆಗೆ ಅಗತ್ಯ ಕ್ರಮ :ಈಶ್ವರ ಖಂಡ್ರೆ; ವನ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯದಂತೆ ಪ್ರವಾಸಿಗರಿಗೆ ಮನವಿ title=

ವೀರನಹೊಸಹಳ್ಳಿ : ಕಾಡಿನಂಚಿನಲ್ಲಿರುವ ಗ್ರಾಮಗಳಿಗೆ ಪದೇ ಪದೇ ಆನೆಗಳು ಬಾರದಂತೆ ತಡೆಯಲು ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.ಅರಣ್ಯ ಇಲಾಖೆ ಕಾಡಾನೆಗಳು ನಾಡಿಗೆ ಬರುವುದನ್ನು ನಿಯಂತ್ರಿಸಲು  ಸೌರ ತಂತಿ ಬೇಲಿ, ತೂಗಾಡುವ ವಿದ್ಯುತ್ ತಂತಿ,ಆನೆ ಕಂದಕ ಹಾಗೂ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ಮಾಡುತ್ತಿದೆ.ರಾಜ್ಯದ ಯಾವ ಭಾಗದಲ್ಲಿ ಹೆಚ್ಚಿನ ಸಮಸ್ಯೆ ಇದೆಯೋ ಅಲ್ಲಿ ತ್ವರಿತವಾಗಿ ತಡೆಗೋಡೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದರು.

ವನ್ಯಜೀವಿಗಳ ಹಾವಳಿಯಿಂದ ಮೈಸೂರು ಮತ್ತು ಕೊಡಗು ಭಾಗದಲ್ಲಿ ಬೆಳೆ ನಾಶ ಆಗುತ್ತಿದೆ. ಜೀವಹಾನಿ ಆಗುತ್ತಿದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದರ ನಿಯಂತ್ರಣಕ್ಕೆ ಈಗಾಗಲೇ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬಜೆಟ್ ನಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣ ಹಂಚಿಕೆಯೂ ಆಗಿದೆ ಎಂದರು.

ಇದನ್ನೂ ಓದಿ : Bengaluru: ಚಿನ್ನಸ್ವಾಮಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿರುದ್ದ ಎಫ್‌ಐಆರ್‌

ಕಾಡಿನಂಚಿನ ಜನರು, ಕೃಷಿಕರು, ತೋಟದ ಮಾಲೀಕರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಬೇಕು.ಅವೈಜ್ಞಾನಿಕ ವಿದ್ಯುತ್ ಬೇಲಿ ಅಥವಾ ಕುಣಿಕೆ ಅಳವಡಿಸಿ ವನ್ಯಜೀವಿಗಳ ಸಾವಿಗೆ ಕಾರಣರಾಗಬಾರದು ಎಂದು ಹೇಳಿದರು. 

ಸ್ವಚ್ಛತೆ ಕಾಪಾಡಲು ಮನವಿ: 
ನಾಗರಹೊಳೆ ಅಭಯಾರಣ್ಯದ ಸಫಾರಿ ಕೇಂದ್ರಕ್ಕೆ ಹೋಗುವ ದಾರಿಯಲ್ಲಿ ಪ್ಲಾಸ್ಟಿಕ್ ಬಾಟಲಿ, ಚಿಪ್ಸ್ ಇತ್ಯಾದಿ ತಿಂಡಿಯ ಖಾಲಿ ಪೊಟ್ಟಣಗಳು ಬಿದ್ದಿರುವುದನ್ನು ಗಮನಿಸಿದ ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದರು.ನಾಗರಹೊಳೆ, ಬಂಡಿಪುರ ಮೊದಲಾದ ತಾಣಗಳು ವನ್ಯಜೀವಿಗಳ ಆವಾಸ ಸ್ಥಾನವಾಗಿದ್ದು, ಇಲ್ಲಿಗೆ ಬರುವ ವಿದ್ಯಾವಂತರೇ ಹೀಗೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯುವುದು ಅಕ್ಷಮ್ಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ವನ್ಯಜೀವಿಗಳು ಇವುಗಳನ್ನು ತಿಂದರೆ ಅವುಗಳ ಪ್ರಾಣಕ್ಕೆ ಸಂಚಕಾರ ಬರುತ್ತದೆ. ಹೀಗಾಗಿ ಪ್ರವಾಸಿಗರು ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯವನ್ನು ವನ ಪ್ರದೇಶದಲ್ಲಿ ಎಸೆಯದಂತೆ ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ

ವನ ಪ್ರದೇಶದ ಜಲಗುಂಡಿಗಳ ವೀಕ್ಷಣೆ: 
ನಾಗರಹೊಳೆ ಅರಣ್ಯದೊಳಗಿರುವ ಜಲ ಗುಂಡಿಗಳಲ್ಲಿರುವ ನೀರಿನ ಪ್ರಮಾಣ, ಮೇವಿನ ಲಭ್ಯತೆಯ ಬಗ್ಗೆಯೂ ಖುದ್ದು ಪರಿಶೀಲನೆ ನಡೆಸಿದ ಈಶ್ವರ ಖಂಡ್ರೆ, ಈ ಬಾರಿ ಮುಂಗಾರು ಆಶಾದಾಯಕವಾಗಿದೆ ಎಂಬ ವರದಿ ಇದೆ.ಆದರೂ  ಮುಂಗಾರು ವಿಳಂಬವಾದರೆ ನೀರಿನ ಕೊರತೆ ಬಾರದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಸಿಬ್ಬಂದಿಗೆ ಸೂಚಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News