ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ

ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಮನವಿ ಮಾಡಿದ್ದಾರೆ.

Written by - Prashobh Devanahalli | Last Updated : May 16, 2024, 06:28 PM IST
    • ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ
    • ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ
ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ  title=
Lakshmi Hebbalkar

ಬೆಳಗಾವಿ: ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಟೀಂ ಇಂಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ ಯಾರು? ವಿರಾಟ್, ಹಾರ್ದಿಕ್, ರೋಹಿತ್’ರನ್ನೇ ಮೀರಿಸಿದ ಆಟಗಾರ ಈತ

ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್

ಮಕ್ಕಳು ರಜಾ ಸಂದರ್ಭದಲ್ಲಿ ನೀರಿನಲ್ಲಿ ಆಟವಾಡಲು ತೆರಳುತ್ತಾರೆ. ಈ ವೇಳೆ ಸುರಕ್ಷಿತ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಜೊತೆಗೆ ಪಾಲಕರೊಬ್ಬರು ಜೊತೆಯಲ್ಲಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆಯಿಂದ ದೂರವಿರಬೇಕು. ಇತರರು ಕೂಡ ಎಚ್ಚರಿಕೆಯಿಂದ ವಾಹನ ಓಡಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪಾಲಕರು ತಿಳಿ ಹೇಳಬೇಕು. ಯಾವುದೇ ರೀತಿಯ ಚಟುವಟಿಕೆ ಸಂದರ್ಭದಲ್ಲಿ ಸುರಕ್ಷತೆಯ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ವಿನಂತಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=O-hDphMYFMg

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News