Karnataka Politics : ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.
ಕಾರ್ಮಿಕ ಮಹಿಳೆಯರಿಗೆ ಬಸ್ ಪಾಸ್ ಕೊಡದ ವಿಚಾರ ಪ್ರತಿಕ್ರಿಯೆ ನೀಡಿದ ಡಿಕೆಶಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಬೊಮ್ಮಾಯಿಯದ್ದು ಯಾವಾಗಲೂ ಫೂಲ್ ಮಾಡುವ ಕೆಲಸ ಎಂದು ಕಿಡಿಕಾರಿದ್ದಾರೆ..
ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ. ಬೆಳಗ್ಗೆ 11ಕ್ಕೆ ಯಲಬುರ್ಗಾದಿಂದ ರಾಣೇಬೆನ್ನೂರುನತ್ತ ಪ್ರಯಣ. ಅಭಿವೃದ್ಧಿ ಕಾಮಗಾರಿ.. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿ.
ನಂದಿಗಿರಿದಾಮದ ರೋಪ್ ವೇ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.. 93.4 ಕೋಟಿ ವೆಚ್ಚದ 2.9 KM ಮೀಟರ್ ಉದ್ದದ ರೋಪ್ ವೇ ನಿರ್ಮಾಣಕ್ಕೆ ಸಿಎಂ ಚಾಲನೆ ನೀಡಿದ್ದಾರೆ.
ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದಕ್ಕೆಲ್ಲ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.